ಸಂಗ್ರಹ ಚಿತ್ರ 
ದೇಶ

1962ರ ಯುದ್ಧದಿಂದ ಸಾಕಷ್ಟು ಪಾಠ ಕಲಿತಿದ್ದೇವೆ, ಚೀನಿ ಪಡೆಗಳ ಎದುರಿಸಲು ಸೇನೆ ಸಮರ್ಥವಾಗಿದೆ: ಅರುಣ್ ಜೇಟ್ಲಿ

1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದೆ. ಇಲ್ಲಿ ಕಲಿತ ಪಾಠದಿಂದಲೇ 1965 ಮತ್ತು 1971ರ ಯುದ್ಧವನ್ನು ಸಮರ್ಥವಾಗಿಯೇ ಎದುರಿಸಿ ಗೆದ್ದು ತೋರಿಸಿದ್ದೇವೆ. ಈಗ ಚೀನೀ ಪಡೆಗಳನ್ನು ಎದುರಿಸಲೂ ಕೂಡ ಭಾರತೀಯ ಸೇನೆ ಸಮರ್ಥವಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: 1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದೆ. ಇಲ್ಲಿ ಕಲಿತ ಪಾಠದಿಂದಲೇ 1965 ಮತ್ತು 1971ರ ಯುದ್ಧವನ್ನು ಸಮರ್ಥವಾಗಿಯೇ ಎದುರಿಸಿ ಗೆದ್ದು ತೋರಿಸಿದ್ದೇವೆ. ಈಗ  ಚೀನೀ ಪಡೆಗಳನ್ನು ಎದುರಿಸಲೂ  ಕೂಡ ಭಾರತೀಯ ಸೇನೆ ಸಮರ್ಥವಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಭಾರತ ಮತ್ತು ಚೀನಾ ದೇಶಗಳ ನಡುವಿನ ಶೀತಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ಗಡಿ ವಿವಾದ ಸಂಬಂಧ ಚೀನಾ ಪತ್ರಿಕೆಗಳ ಕದನೋತ್ಸಾಹದ ಬರವಣಿಗೆಗಳ ಹಿನ್ನಲೆಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಇಲಾಖೆಯ  ಹೊಣೆಗಾರಿಕೆ ಹೊತ್ತಿರುವ ಅರುಣ್ ಜೇಟ್ಲಿ ಅವರು, 1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದ್ದು, ಪ್ರಸ್ತುತ ನಮ್ಮ ಸೇನೆ ಯಾವುದೇ ಬಾಹ್ಯ ಬೆದರಿಕೆಗಳನ್ನು ಎದುರಿಸಲು ಸಮರ್ಥವಾಗಿದೆ. ನಮ್ಮ ಸೇನಾ ಪಡೆ ಪೂರ್ಣ ಪ್ರಮಾಣದ ಸಾಮರ್ಥ್ಯ ಹೊಂದಿದ್ದು, ಚೀನಾ ಸೈನಿಕರ ದಾಳಿಯನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ "ಕ್ವಿಟ್‌ ಇಂಡಿಯಾ ಚಳವಳಿಗೆ 75 ವರ್ಷದ ಸ್ಮರಣೆ'' ವೇದಿಕೆಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ ಅವರು, "1962ರಲ್ಲಿ ಆದ ತಪ್ಪುಗಳೇ ನಾವು ಎಚ್ಚೆತ್ತುಕೊಳ್ಳುವಂತೆ ಮಾಡಿದವು. ಹೀಗಾಗಿಯೇ ನಾವು  ಸೇನೆಯನ್ನು ಪೂರ್ಣ ಪ್ರಮಾಣದ ಸಾಮರ್ಥ್ಯ ಹೊಂದುವಂತೆ ಮಾಡಿದೆವು. ಈ ಮೂಲಕ 1965 ಮತ್ತು 1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧಗಳಲ್ಲಿ ಗೆದ್ದು ತೋರಿಸಿದೆವು ಎಂದು ಹೇಳಿದರು, ಅಂತೆಯೇ 1948ರಲ್ಲಿ  ಪಾಕಿಸ್ತಾನ ವಶಕ್ಕೆ ಪಡೆದ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮತ್ತೆ ಭಾರತದ ಸುಪರ್ದಿಗೆ ತೆಗೆದುಕೊಳ್ಳಲು ದೇಶದ ಜನ ಬಯಸುತ್ತಿದ್ದಾರೆ. ಗಡಿಯಾಚೆಯ ಕೆಲವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಆಗಾಗ  ಬೆದರಿಕೆಯೊಡ್ಡುತ್ತಲೇ ಇದ್ದಾರೆ. ಇವರನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯ ಸಂಪೂರ್ಣವಾಗಿ ಭಾರತ ಸೇನೆಗೆ ಇದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಶದಲ್ಲಿರುವ ಕಾಶ್ಮೀರವನ್ನು ನಾವು ಮರೆತಿದ್ದೇವೆ ಎಂದು ಅವರು ಭಾವಿಸಿದ್ದಾರೆ. ಆದರೆ ಆ ಪ್ರದೇಶ ಭಾರತದ್ದೇ ಎಂಬುದು ಅವರಿಗೆ ನೆನಪಿರಬೇಕು ಎಂದು ಜೇಟ್ಲಿ ಪರೋಕ್ಷವಾಗಿ ಚೀನಾ ಮತ್ತು ಪಾಕಿಸ್ತಾನಕ್ಕೆ  ತಿವಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT