ಸಂಗ್ರಹ ಚಿತ್ರ 
ದೇಶ

1962ರ ಯುದ್ಧದಿಂದ ಸಾಕಷ್ಟು ಪಾಠ ಕಲಿತಿದ್ದೇವೆ, ಚೀನಿ ಪಡೆಗಳ ಎದುರಿಸಲು ಸೇನೆ ಸಮರ್ಥವಾಗಿದೆ: ಅರುಣ್ ಜೇಟ್ಲಿ

1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದೆ. ಇಲ್ಲಿ ಕಲಿತ ಪಾಠದಿಂದಲೇ 1965 ಮತ್ತು 1971ರ ಯುದ್ಧವನ್ನು ಸಮರ್ಥವಾಗಿಯೇ ಎದುರಿಸಿ ಗೆದ್ದು ತೋರಿಸಿದ್ದೇವೆ. ಈಗ ಚೀನೀ ಪಡೆಗಳನ್ನು ಎದುರಿಸಲೂ ಕೂಡ ಭಾರತೀಯ ಸೇನೆ ಸಮರ್ಥವಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: 1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದೆ. ಇಲ್ಲಿ ಕಲಿತ ಪಾಠದಿಂದಲೇ 1965 ಮತ್ತು 1971ರ ಯುದ್ಧವನ್ನು ಸಮರ್ಥವಾಗಿಯೇ ಎದುರಿಸಿ ಗೆದ್ದು ತೋರಿಸಿದ್ದೇವೆ. ಈಗ  ಚೀನೀ ಪಡೆಗಳನ್ನು ಎದುರಿಸಲೂ  ಕೂಡ ಭಾರತೀಯ ಸೇನೆ ಸಮರ್ಥವಾಗಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಭಾರತ ಮತ್ತು ಚೀನಾ ದೇಶಗಳ ನಡುವಿನ ಶೀತಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ಗಡಿ ವಿವಾದ ಸಂಬಂಧ ಚೀನಾ ಪತ್ರಿಕೆಗಳ ಕದನೋತ್ಸಾಹದ ಬರವಣಿಗೆಗಳ ಹಿನ್ನಲೆಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಇಲಾಖೆಯ  ಹೊಣೆಗಾರಿಕೆ ಹೊತ್ತಿರುವ ಅರುಣ್ ಜೇಟ್ಲಿ ಅವರು, 1962ರ ಯುದ್ಧದಿಂದ ಭಾರತ ಸಾಕಷ್ಟು ಪಾಠ ಕಲಿತಿದ್ದು, ಪ್ರಸ್ತುತ ನಮ್ಮ ಸೇನೆ ಯಾವುದೇ ಬಾಹ್ಯ ಬೆದರಿಕೆಗಳನ್ನು ಎದುರಿಸಲು ಸಮರ್ಥವಾಗಿದೆ. ನಮ್ಮ ಸೇನಾ ಪಡೆ ಪೂರ್ಣ ಪ್ರಮಾಣದ ಸಾಮರ್ಥ್ಯ ಹೊಂದಿದ್ದು, ಚೀನಾ ಸೈನಿಕರ ದಾಳಿಯನ್ನು ಸಮರ್ಥವಾಗಿ ನಿಭಾಯಿಸಲಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ "ಕ್ವಿಟ್‌ ಇಂಡಿಯಾ ಚಳವಳಿಗೆ 75 ವರ್ಷದ ಸ್ಮರಣೆ'' ವೇದಿಕೆಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ ಅವರು, "1962ರಲ್ಲಿ ಆದ ತಪ್ಪುಗಳೇ ನಾವು ಎಚ್ಚೆತ್ತುಕೊಳ್ಳುವಂತೆ ಮಾಡಿದವು. ಹೀಗಾಗಿಯೇ ನಾವು  ಸೇನೆಯನ್ನು ಪೂರ್ಣ ಪ್ರಮಾಣದ ಸಾಮರ್ಥ್ಯ ಹೊಂದುವಂತೆ ಮಾಡಿದೆವು. ಈ ಮೂಲಕ 1965 ಮತ್ತು 1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧಗಳಲ್ಲಿ ಗೆದ್ದು ತೋರಿಸಿದೆವು ಎಂದು ಹೇಳಿದರು, ಅಂತೆಯೇ 1948ರಲ್ಲಿ  ಪಾಕಿಸ್ತಾನ ವಶಕ್ಕೆ ಪಡೆದ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮತ್ತೆ ಭಾರತದ ಸುಪರ್ದಿಗೆ ತೆಗೆದುಕೊಳ್ಳಲು ದೇಶದ ಜನ ಬಯಸುತ್ತಿದ್ದಾರೆ. ಗಡಿಯಾಚೆಯ ಕೆಲವರು ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಆಗಾಗ  ಬೆದರಿಕೆಯೊಡ್ಡುತ್ತಲೇ ಇದ್ದಾರೆ. ಇವರನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯ ಸಂಪೂರ್ಣವಾಗಿ ಭಾರತ ಸೇನೆಗೆ ಇದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಶದಲ್ಲಿರುವ ಕಾಶ್ಮೀರವನ್ನು ನಾವು ಮರೆತಿದ್ದೇವೆ ಎಂದು ಅವರು ಭಾವಿಸಿದ್ದಾರೆ. ಆದರೆ ಆ ಪ್ರದೇಶ ಭಾರತದ್ದೇ ಎಂಬುದು ಅವರಿಗೆ ನೆನಪಿರಬೇಕು ಎಂದು ಜೇಟ್ಲಿ ಪರೋಕ್ಷವಾಗಿ ಚೀನಾ ಮತ್ತು ಪಾಕಿಸ್ತಾನಕ್ಕೆ  ತಿವಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT