ಎಂ ಕೆ ಸ್ಟಾಲಿನ್ 
ದೇಶ

ತಮಿಳುನಾಡು ಸಿಎಂ ಪಳನಿಸ್ವಾಮಿ ವಿರುದ್ಧ ಡಿಎಂಕೆಯಿಂದ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ಎಐಎಡಿಎಂಕೆಯಲ್ಲಿನ ಎರಡು ಬಣಗಳು ಮತ್ತೆ ಒಂದಾಗುತ್ತಿವೆ ಎಂಬ ಸುದ್ದಿಯ ಬೆನ್ನಲ್ಲೇ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಮುಖ್ಯಮಂತ್ರಿ ...

ಚೆನ್ನೈ: ಎಐಎಡಿಎಂಕೆಯಲ್ಲಿನ ಎರಡು ಬಣಗಳು ಮತ್ತೆ ಒಂದಾಗುತ್ತಿವೆ ಎಂಬ ಸುದ್ದಿಯ ಬೆನ್ನಲ್ಲೇ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಹೊಸ ಬಾಂಬ್ ಸಿಡಿಸಿದೆ.
ಡಿಎಂಕೆ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಂಕೆ ಕಾರ್ಯಾದ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ವಿರುದ್ಧ ನಾವು ಅವಿಶ್ವಾಸ ನಿರ್ಣಯ ಮಂಡಿಸುತ್ತೇವೆ ಎಂದಿದ್ದಾರೆ.
ನಿನ್ನೆ ತಮಿಳುನಾಡಿನಲ್ಲಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಮತ್ತು ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೂ ಗೇಟ್ ಪಾಸ್ ನೀಡಲು ಸಿದ್ಧತೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕ ಸ್ಟಾಲಿನ್ ಅವರು, ಮುಖ್ಯಮಂತ್ರಿ ಪಳನಿಸ್ವಾಮಿ, ಮಾಜಿ ಮುಖ್ಯಮಂತ್ರಿ ಪನ್ನೀರ್ ಸೇಲ್ವಂ ಹಾಗೂ ಟಿಟಿವಿ ದಿನಕರನ್ ಮೂರು ಬಣಗಳಾಗಿ ವಿಭಜನೆಗೊಂಡಿದ್ದು, ಸರ್ಕಾರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು