ದಾಮ್ ಶೋ ದೋರ್ ಜೀ-ಸುಷ್ಮಾ ಸ್ವರಾಜ್ 
ದೇಶ

ಡೋಕ್ಲಾಂ ಬಿಕ್ಕಟ್ಟು ಕುರಿತು ಭೂತಾನ್ ವಿದೇಶಾಂಗ ಸಚಿವರ ಜತೆ ಸುಷ್ಮಾ ಸ್ವರಾಜ್ ಚರ್ಚೆ

ಭೂತಾನ್ ನ ವಿದೇಶಾಂಗ ಸಚಿವ ದಾಮ್ ಶೋ ದೋರ್ ಜೀ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಡೋಕ್ಲಾಂ ಬಿಕ್ಕಟ್ಟು...

ಕಠ್ಮಂಡು: ಭೂತಾನ್ ನ ವಿದೇಶಾಂಗ ಸಚಿವ ದಾಮ್ ಶೋ ದೋರ್ ಜೀ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಡೋಕ್ಲಾಂ ಬಿಕ್ಕಟ್ಟು ಸೇರಿದಂತೆ ಹಲವು ದ್ವಿಪಕ್ಷೀಯ ವಿಷಯಗಳನ್ನು ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಕಠ್ಮಂಡುವಿನಲ್ಲಿ ನಡೆಯುತ್ತಿರುವ ಬಿಮ್ ಸ್ಟೆಕ್ ಶೃಂಗ ಸಭೆ ಹಿನ್ನೆಲೆ ಭೂತಾನ್ ವಿದೇಶಾಂಗ ಸಚಿವರು ಆಗಮಿಸಿದ್ದು ಈ ವೇಳೆ ಸುಷ್ಮಾ ಸ್ವರಾಜ್ ಅವರು ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ. 
ಬಿಮ್ ಸ್ಟೆಕ್ ಕೂಡದಲ್ಲಿ ಬಾಂಗ್ಲಾದೇಶ, ಭಾರತ, ಮ್ಯಾನ್ ಮಾರ್, ಶ್ರೀಲಂಕಾ, ಥಾಯ್ಲೆಂಡ್, ಭೂತಾನ್ ಮತ್ತು ನೇಪಾಲ ದೇಶಗಳಿವೆ. 
ಭೂತಾನ್ ನ ವಿದೇಶಾಂಗ ಸಚಿವ ದಾಮ್ ಶೋ ದೋರ್ ಜೀ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭೇಟಿಯಾಗಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. 
ಸಿಕ್ಕಿಂ ನಲ್ಲಿ ಚೀನಾದ ಪೀಪಲ್ಸ್ ಲಿಬರೆಶನ್ ಆರ್ಮಿ ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ಭಾರತೀಯ ಯೋಧರು ತಡೆದಿದ್ದರು. ಈ ಹಿನ್ನೆಲೆಯಲ್ಲಿ ಜೂನ್ 16ರಿಂದ ಸಿಕ್ಕಿಂ ಸೆಕ್ಟರ್ ನ ಡೋಕ್ಲಾಂ ಬಳಿ ಉಭಯ ಸೇನೆಯ ಯೋಧರು ಮುಖಾಮುಖಿಯಾಗಿದ್ದು ಅಂದಿನಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT