ಸಂಗ್ರಹ ಚಿತ್ರ 
ದೇಶ

ಆ.15ರಂದು ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾರಾಟ ಕಡ್ಡಾಯ: ಮದರಸಾಗಳಿಗೆ 'ಮದರಸಾ ಶಿಕ್ಷಾ ಪರಿಷತ್ ಸೂಚನೆ'

ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶದ ಮದರಸಾ ಶಿಕ್ಷಾ ಪರಿಷತ್ ಶುಕ್ರವಾರ ನಿರ್ದೇಶನ ನೀಡಿದೆ...

ಲಖನೌ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ರಾಜ್ಯದಲ್ಲಿರುವ ಎಲ್ಲಾ ಮದರಸಾಗಳಲ್ಲೂ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕೆಂದು ಉತ್ತರಪ್ರದೇಶದ ಮದರಸಾ ಶಿಕ್ಷಾ ಪರಿಷತ್ ಶುಕ್ರವಾರ ನಿರ್ದೇಶನ ನೀಡಿದೆ. 

ಈ ಹಿಂದೆಯೂ ಇಂಥಹ ಸೂಚನೆಗಳು ಮದರಸಾಗಳಿಗೆ ರಾಜ್ಯ ಸರ್ಕಾರದಿಂದ ರವಾನೆಯಾಗುತ್ತಿದ್ದವು. ಆದರೆ, ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚನೆ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. 

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಮದರಸಾಗಳಿಗೂ ಸೂಚನೆ ನೀಡಿರುವ ಮದರಸಾ ಶಿಕ್ಷಾ ಪರಿಷತ್, ಸ್ವಾತಂತ್ರ್ಯ ದಿನಚರಣೆಯಂದು ದ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡುವಂತೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದೆ. ಅಲ್ಲದೆ, ಸ್ವಾತಂತ್ರ್ಯ ದಿನದ ವೇಳೆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ತಿಳಿಸಿರುವ ಪರಿಷತ್, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಹೇಳಿಬೇಕು, ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಹೇಳಬೇಕೆಂದು ನಿರ್ದೇಶಿಸಿದೆ. 

ಸುತ್ತೋಲೆಯಲ್ಲಿ 8 ಗಂಟೆ ವೇಳೆಗೆ ಧ್ವಜಾರೋಹಣ ಮಾಡಿ, ತಮ್ಮಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳನ್ನು ಶಿಕ್ಷಣ ಪರಿಷತ್ ಗೆ ಕಳುಹಿಸಬೇಕೆಂದು ತಾಕೀತು ಮಾಡಲಾಗಿದೆ. 

ಕೆಲ ದಿನಗಳ ಹಿಂದೆಷ್ಟೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಮದರಸಾ ಶಿಕ್ಷಾ ಪರಿಷತ್ ಗೆ ಸೂಚನೆಯೊಂದನ್ನು ನೀಡಿತ್ತು. ಆಗಸ್ಟ್ 15 ರಂದು ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಲಾಗಿತ್ತು. 

ಸರ್ಕಾರ ಸೂಚನೆಯಂತೆಯೇ ಎಲ್ಲಾ ಮದರಸಾಗಳಿಗೂ ಮದರಸಾ ಶಿಕ್ಷಾ ಪರಿಷತ್ ಸುತ್ತೋಲೆಯನ್ನು ಹೊರಡಿಸಿದೆ. ಹೊಸ ಸೂಚನೆಗಳನ್ನು ಈಗಾಗಲೇ ಎಲ್ಲಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ರವಾನೆ ಮಾಡಿದ್ದು, ನಿರ್ದೇಶನಗಳನ್ನು ಕಠಿಣವಾಗಿ ಪಾಲನೆ ಮಾಡುವಂತೆ ತಿಳಿಸಲಾಗಿದೆ. 

ಉತ್ತರಪ್ರದೇಶದಲ್ಲಿ ಮದರಸಾ ಶಿಕ್ಷಣ ಪರಿಷತ್ ನಿಂದ ಅಂಗೀಕೃತವಾದ 8000 ಮದರಸಾಗಳಿದ್ದು, ಇವುಗಳಲ್ಲಿ 560 ಮದರಸಾಗಳು ರಾಜ್ಯ ಸರ್ಕಾರದ ಸಂಪೂರ್ಣ ಅನುದಾನಿತ ಶಿಕ್ಷಣ ಸಂಸ್ಥೆಗಳಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT