ಮುಂಬೈ: ಮಹಾರಾಷ್ಟ್ರದ ಕೈಗಾರಿಕ ಸಚಿವ, ಶಿವಸೇನೆ ಶಾಸಕ ಸುಭಾಷ್ ದೇಸಾಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ಅಂಗೀಕರಿಸಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಿರಾಕರಿಸಿದ್ದಾರೆ.
ಉದ್ಧವ್ ಠಾಕ್ರೆ ಅವರ ಆಪ್ತರಾಗಿರುವ ಶಿವಸೇನೆಯ ಪ್ರಮುಖ ನಾಯಕ ಸುಭಾಷ್ ದೇಸಾಯಿ ರಾಜೀನಾಮೆ ನೀಡುವುದಕ್ಕೂ ಮುನ್ನ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚೆ ನಡೆಸಿದ್ದು, ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದರು. ಸಿಎಂ ದೇವೇಂದ್ರ ಫಡ್ನವೀಸ್ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಿವಸೇನೆ ಸದಸ್ಯ ಸುಭಾಷ್ ದೇಸಾಯಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೇಸಾಯಿ ವಿರುದ್ಧ ನಿಯಮ ಬಾಹಿರವಾಗಿ 12,000 ಹೆಕ್ಟೇರ್ ಗಟ್ಟಲೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಕೇಳಿಬಂದಿದೆ.