ದೇಶ

ಗೋರಖ್ ಪುರ ದುರಂತ: ದೆಹಲಿ ಸರ್ಕಾರದಿಂದ ತುರ್ತು ಸಭೆ

Srinivas Rao BV
ನವದೆಹಲಿ: ಉತ್ತರ ಪ್ರದೇಶದ ಗೋರಖ್ ಪುರದಲ್ಲಿನ ಬಿಆರ್ ಡಿ ಆಸ್ಪತ್ರೆ ದುರಂತದಲ್ಲಿ 70 ಮಕ್ಕಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ತುರ್ತು ಸಭೆ ಕರೆದಿದೆ. 
ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆ.16 ರಂದು ತುರ್ತು ಸಭೆ ನಡೆಯಲಿದ್ದು, ದೆಹಲಿಯ ಎಲ್ಲಾ ಆಸ್ಪತ್ರೆಗಳಲ್ಲೂ ಮುನ್ನೆಚ್ಚರಿಕೆ ವಹಿಸುವಂತೆ ಕೇಜ್ರಿವಾಲ್ ಈಗಾಗಲೇ ಸೂಚನೆ ನೀಡಿದ್ದಾರೆ. ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಮಕ್ಕಳ ಸಾವಿನ ಸಂಖ್ಯೆ 70 ಕ್ಕೇರಿದೆ. 
SCROLL FOR NEXT