ನವದೆಹಲಿ: ಗೋರ್ಖಾಲ್ಯಾಂಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥ ಬಿಮಲ್ ಗುರುಂಗ್ ಅವರನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಸಂಜೆ 4:30 ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಮಾತುಕತೆಗೆ ಹಾಜರಾಗುವಂತೆ ಕೇಂದ್ರ ಗೃಹ ಇಲಾಖೆ ಜಿಜೆಎಂ ಗೆ ಸೂಚನೆ ನೀಡಿದೆ. ಗೋರ್ಖಾಲ್ಯಾಂಡ್ ಪ್ರತ್ಯೇಕ ರಾಜ್ಯಕ್ಕಾಗಿ ಕೇಳಿಬಂದಿರುವ ಬೇಡಿಕೆ ಜನರ ಚಳುವಳಿಯಗಿದ್ದು, ಎಲ್ಲಾ ಪಕ್ಷಗಳು ಹಾಗೂ ರಾಜಕೀಯೇತರ ಸಂಸ್ಥೆಗಳೊಂದಿಗೆ ಗೃಹ ಇಲಾಖೆಯ ಆಹ್ವಾನವನ್ನು ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.
ಚಳುವಳಿಯನ್ನು ಪ್ರಾರಂಭಿಸಿರುವ ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಲಿದ್ದು, ಗೋರ್ಖಾಲ್ಯಾಂಡ್ ರಾಜ್ಯದ ಬೇಡಿಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಕಂಡುಕೊಳ್ಳಲು ಈ ಸಭೆಯಲ್ಲಿ ಸಾಧ್ಯವಾಗಲಿದೆ ಎಂಬ ವಿಶ್ವಾಸವಿದೆ ಎಂದು ಗೋರ್ಖಾ ಜನಮುಕ್ತಿ ಮೋರ್ಚಾದ ಮುಖ್ಯಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.