ಕೇಂದ್ರ ಸಚಿವ ಪಿಯೂಷ್ ಗೋಯಲ್ 
ದೇಶ

ವಿದ್ಯುತ್ ವಾಹನಗಳಲ್ಲಿ ಭಾರತ ಮುಂಚೂಣಿ ವಹಿಸಲಿದೆ: ಸಚಿವ ಪಿಯೂಷ್ ಗೋಯಲ್

ವಿದ್ಯುತ್ ವಾಹನಗಳನ್ನು ಪ್ರಚುರಪಡಿಸುವಲ್ಲಿ ಭಾರತ ವಿಶ್ವಕ್ಕೆ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಈ ಮೂಲಕ ಮುಂಬೈ....

ಮುಂಬೈ: ವಿದ್ಯುತ್ ವಾಹನಗಳನ್ನು ಪ್ರಚುರಪಡಿಸುವಲ್ಲಿ ಭಾರತ ವಿಶ್ವಕ್ಕೆ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಈ ಮೂಲಕ ಮುಂಬೈ, ದೆಹಲಿ, ಪುಣೆಯಂತಹ ನಗರಗಳು ಮಾಲಿನ್ಯ ರಹಿತವಾಗಲಿವೆ ಎಂದು ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೇಶಾದ್ಯಂತ ನವೀಕರಣ ಇಂಧನವನ್ನು ಪ್ರಚಾರ ಮಾಡುವಲ್ಲಿ ಭಾರತ ಮುಂಚೂಣಿಯಲ್ಲಿದೆ. ಇಂಧನ ದಕ್ಷತೆಗೆ ನಾವು ಗಮನ ಹರಿಸುತ್ತಿದ್ದು ಆ ಮೂಲಕ ಇಂಗಾಲದ ಡೈ ಆಕ್ಸೈಡ್ ನ ಪ್ರಮಾಣ ವಾತಾವರಣದಲ್ಲಿ ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು. ಹವಾಮಾನ ಬದಲಾವಣೆ ಸವಾಲುಗಳನ್ನು ಸಾಮೂಹಿಕವಾಗಿ ಎದುರಿಸಬೇಕು ಎಂದು ಹೇಳಿದರು.
ಭಯೋತ್ಪಾದನೆ ಬಗ್ಗೆ ಮಾತನಾಡಿದ ಸಚಿವ ಗೋಯಲ್, ಮಾನವನ ಅಸ್ಥಿತ್ವಕ್ಕೆ ಧಕ್ಕೆಯನ್ನುಂಟುಮಾಡುವ, ಸಮಾಜದಲ್ಲಿ ಅಸ್ಥಿರತೆಯನ್ನು ಉಂಟುಮಾಡುವ ಈ ಅಪಾಯಕಾರಿ ಅಸಹಿಷ್ಣುತೆಗಳಿಂದ ಏನು ಹಾನಿಯುಂಟಾಗುತ್ತದೆ ಎಂದು ಇಡೀ ವಿಶ್ವಕ್ಕೆ ಅರ್ಥವಾಗಿದೆ. ಭಯೋತ್ಪಾದನೆ ವಿರುದ್ಧ ನಾವೆಲ್ಲಾ ಒಗ್ಗಟ್ಟಿನಿಂದ ಹೋರಾಡಿ ಮಾತುಕತೆ ಮೂಲಕ ಮಾತ್ರವೇ ಇದನ್ನು ನಿಗ್ರಹಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT