ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಬ್ಲೂವೇಲ್ ಗೇಮ್ ನಿಷೇಧಿಸಿ: ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರ

ಮಕ್ಕಳ ಜೀವನಕ್ಕೆ ಅಪಾಯಕಾರಿಯಾಗಿರುವ ರಷ್ಯಾ ಮೂಲದ ಬ್ಲೂ ವೇಲ್ ಅಂತರ್ಜಾಲ ಗೇಮ್ ಮೇಲೆ ಕೂಡಲೇ ನಿಷೇಧ ಹೇರುಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ...

ತಿರುವನಂತಪುರ: ಮಕ್ಕಳ ಜೀವನಕ್ಕೆ ಅಪಾಯಕಾರಿಯಾಗಿರುವ ರಷ್ಯಾ ಮೂಲದ ಬ್ಲೂ ವೇಲ್ ಅಂತರ್ಜಾಲ ಗೇಮ್ ಮೇಲೆ ಕೂಡಲೇ ನಿಷೇಧ ಹೇರುಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 
ಬ್ಲೂವೇಲ್ ಗೇಮ್ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರವೊಂದನ್ನು ಬರೆದಿರುವ ಅವರು, ಪ್ರಾಣಕ್ಕೆ ಬೆದರಿಕೆಯೊಡ್ಡುವ ಈ ಆಟವು ನಮ್ಮ ಹೊಸ್ತಿಲಲ್ಲೇ ಇದೆ. ರಾಷ್ಟ್ರದಾದ್ಯಂತ ಅತ್ಯಮೂಲ್ಯವಾದ ಜೀವಗಳ ರಕ್ಷಣೆಗಾಗಿ ಬ್ಲೂವೇಲ್ ಆಟದ ಮೇಲೆ ನಿಷೇಧ ಹೇರಿಕೆಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಹೇಳಿಕೊಂಡಿದ್ದಾರೆ. 
ಇದೇನು ವಿಡಿಯೋ ಗೇಮ್ ಅಲ್ಲ. ಆದರೆ, ಅನಾಮಿಕ ವ್ಯಕ್ತಿಯಿಂದ ನಿರ್ದೇಶನ ಪಡೆಯುವ ಈ ಆಟವು ಕೊನೆಗೆ ಆತ್ಮಹತ್ಯೆಯಲ್ಲಿ ಅಂತ್ಯವಾಗುತ್ತದೆ. ಈ ಗೇಮ್ ನಿಂದಾಗಿ ಈಗಾಗಲೇ ರಾಷ್ಟ್ರದಲ್ಲಿ ಕೆಲವರು ಆತ್ಮಹತ್ಯೆಗೂ ಶರಣಾಗಿರುವ ಬಗ್ಗೆ ಮಾಧ್ಯಮ ವರದಿಗಳು ಬೆಳಕು ಚೆಲ್ಲಿವೆ ಎಂದು ತಿಳಿಸಿದ್ದಾರೆ. ಅಲ್ಲದೆ, ರಾಜ್ಯ ಪೊಲೀಸರು ಜಾಗೃತಿ ಮೂಡಿಸಲು ಯತ್ನ ನಡೆಸುತ್ತಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT