ಸಾಂದರ್ಭಿಕ ಚಿತ್ರ 
ದೇಶ

ಜಮ್ಮುಕಾಶ್ಮೀರದ ಬದ್ಗಾಮ್ ನಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: ನಾಲ್ವರು ಯೋಧರಿಗೆ ಗಾಯ

ಅಪರಿಚಿತ ಉಗ್ರರ ಗುಂಪೊಂದು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ...

ಜಮ್ಮು: ಅಪರಿಚಿತ ಉಗ್ರರ ಗುಂಪೊಂದು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.ದಾಳಿಯಲ್ಲಿ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. 
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಯಾಸೀನ್ ಐಟೂ ನನ್ನು ಸೇನಾ ಪಡೆ ಕಾಶ್ಮೀರದ ಸೋಪಿಯಾನ್ ನಲ್ಲಿ ಎನ್ ಕೌಂಟರ್ ನಡೆಸಿ ಹತ್ಯೆಗೈದ ನಂತರ ಗ್ರೆನೇಡ್ ದಾಳಿ ಪ್ರಮಾಣ ಹೆಚ್ಚಿದೆ. 
ಗಾಯಗೊಂಡ ಸಿಆರ್ ಪಿಎಫ್ ಪಡೆ ಯೋಧರನ್ನು ಎಸ್ ಕೆ ಐಎಮ್ ಎಸ್  ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. 
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸ್ವ-ಶೈಲಿಯ ಆಪರೇಷನ್ ಕಮಾಂಡರ್ ಯಾಸಿನ್ ಐಟೂ ಅಲಿಯಾಸ್ ಗಝ್ನವಿ ಸೇರಿದಂತೆ ಮೂವರು ಉಗ್ರರನ್ನು ಭಾನುವಾರ ಎನ್ ಕೌಂಟರ್ ಮಾಡಲಾಗಿತ್ತು
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದ ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಇಬ್ಬರು ಯೋಧರು ಸಹ ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT