ಸಂಗ್ರಹ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕೆಂಗಣ್ಣು: ದೆಹಲಿಗೆ 7 ಸುತ್ತಿನ ಭದ್ರತಾ ಕಣ್ಗಾವಲು

71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತದಲ್ಲಿ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ನವದೆಹಲಿ: 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತದಲ್ಲಿ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ರಾಜಧಾನಿ ದೆಹಲಿಯಲ್ಲಿ ಎಸ್​ಪಿಜಿ, ಎನ್​ಎಸ್​ಜಿ, ಶಾರ್ಪ್​ ಶೂಟರ್, ಕಮಾಂಡರ್​, ದೆಹಲಿ ಪೊಲೀಸ್​, ಸಿಆರ್​ಪಿಎಫ್​ ಸಿಬ್ಬಂದಿಯನ್ನು ಭದ್ರತೆಗೆ  ನಿಯೋಜನೆ ಮಾಡಲಾಗಿದೆ. ದೆಹಲಿ ಭದ್ರತೆಗಾಗಿಯೇ 135 ಕಂಪನಿಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 13500 ಸೇನಾ ಸಿಬ್ಬಂದಿಗಳು ಭದ್ರತಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ವಾಟ್ ನ ಸುಮಾರು 700ಕ್ಕೂ ಅಧಿಕ  ಕಮಾಂಡೋಗಳು ಕೆಂಪುಕೋಟೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 24 ಪರಾಕ್ರಮ ತಂಡಗಳ ಸೈನಿಕರು ಕೆಂಪುಕೋಟೆ ಸುತ್ತಮುತ್ತ ಸರ್ವೇಕ್ಷಣೆ ನಡೆಸುತ್ತಿದ್ದಾರೆ.

ಇನ್ನು ಕೆಂಪುಕೋಟೆಯ ಸುತ್ತಮುತ್ತ 350 ಸಿಸಿ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಅಂತೆಯೇ ಈ ಪೈಕಿ ಮೋದಿ ಭದ್ರತೆಗೆ 40 ಸಿಸಿ ಕ್ಯಾಮರಾಗಳ ಮೇಲೆ ನಿಗಾ ವಹಿಸಲಾಗಿದೆ. ದೆಹಲಿಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು  600ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪ್ರತೀ ಕಿ.ಮೀಗೆ ಎರಡರಂತೆ ಹೈ ರೆಸಲ್ಯೂಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ, ಶ್ವಾನ ಮತ್ತು ಅಶ್ವದಳಗಳು  ದಿನವಿಡೀ ಕೆಂಪುಕೋಟೆಯಲ್ಲಿ ಗಸ್ತು ತಿರುಗಲಿವೆ.

ಒಟ್ಟಾರೆ ಇಂದು ದೇಶದ ಕೇಂದ್ರ ಬಿಂದುವಾಗಿರುವ ದೆಹಲಿ 7 ಸುತ್ತಿನ ಕೋಟೆಯಾಗಿ ಮಾರ್ಪಟ್ಟಿದ್ದು, ದೆಹಲಿ ಮಾತ್ರವಲ್ಲದೇ ದೇಶದ ಪ್ರಮುಖ ನಗರಗಳು ಹಾಗೂ ರಾಜಧಾನಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಗೆ ಬಿಗ್ ಶಾಕ್: 'ಮರುಎಣಿಕೆ' ಫಲಿತಾಂಶಕ್ಕೆ ಸುಪ್ರೀಂ ತಡೆ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಕಥೆ ಏನು?

Indian Stock Market: ಮುಗಿಯದ ಮಧ್ಯ ಪ್ರಾಚ್ಯ ಯುದ್ಧ, Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ

TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khanಗೆ ನ್ಯಾಯಾಂಗ ಬಂಧನ!

VIDEO: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್

ಬಂಗಾಳದಲ್ಲಿ ಬದಲಾವಣೆಯ ಪರ್ವ: ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು, ಮೊದಲ ಸಂಪುಟ ಸಭೆಯಲ್ಲೇ ಮಹತ್ವದ ನಿರ್ಧಾರ..!

SCROLL FOR NEXT