ಸಂಗ್ರಹ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕೆಂಗಣ್ಣು: ದೆಹಲಿಗೆ 7 ಸುತ್ತಿನ ಭದ್ರತಾ ಕಣ್ಗಾವಲು

71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತದಲ್ಲಿ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ನವದೆಹಲಿ: 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿರುವ ಭಾರತದಲ್ಲಿ ಉಗ್ರರು ದಾಳಿ ನಡೆಸುವ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ರಾಜಧಾನಿ ದೆಹಲಿಯಲ್ಲಿ ಎಸ್​ಪಿಜಿ, ಎನ್​ಎಸ್​ಜಿ, ಶಾರ್ಪ್​ ಶೂಟರ್, ಕಮಾಂಡರ್​, ದೆಹಲಿ ಪೊಲೀಸ್​, ಸಿಆರ್​ಪಿಎಫ್​ ಸಿಬ್ಬಂದಿಯನ್ನು ಭದ್ರತೆಗೆ  ನಿಯೋಜನೆ ಮಾಡಲಾಗಿದೆ. ದೆಹಲಿ ಭದ್ರತೆಗಾಗಿಯೇ 135 ಕಂಪನಿಗಳನ್ನು ನಿಯೋಜನೆ ಮಾಡಲಾಗಿದ್ದು, ಸುಮಾರು 13500 ಸೇನಾ ಸಿಬ್ಬಂದಿಗಳು ಭದ್ರತಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ವಾಟ್ ನ ಸುಮಾರು 700ಕ್ಕೂ ಅಧಿಕ  ಕಮಾಂಡೋಗಳು ಕೆಂಪುಕೋಟೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, 24 ಪರಾಕ್ರಮ ತಂಡಗಳ ಸೈನಿಕರು ಕೆಂಪುಕೋಟೆ ಸುತ್ತಮುತ್ತ ಸರ್ವೇಕ್ಷಣೆ ನಡೆಸುತ್ತಿದ್ದಾರೆ.

ಇನ್ನು ಕೆಂಪುಕೋಟೆಯ ಸುತ್ತಮುತ್ತ 350 ಸಿಸಿ ಕ್ಯಾಮೆರಾಗಳನ್ನ ಅಳವಡಿಸಲಾಗಿದೆ. ಅಂತೆಯೇ ಈ ಪೈಕಿ ಮೋದಿ ಭದ್ರತೆಗೆ 40 ಸಿಸಿ ಕ್ಯಾಮರಾಗಳ ಮೇಲೆ ನಿಗಾ ವಹಿಸಲಾಗಿದೆ. ದೆಹಲಿಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು  600ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪ್ರತೀ ಕಿ.ಮೀಗೆ ಎರಡರಂತೆ ಹೈ ರೆಸಲ್ಯೂಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ, ಶ್ವಾನ ಮತ್ತು ಅಶ್ವದಳಗಳು  ದಿನವಿಡೀ ಕೆಂಪುಕೋಟೆಯಲ್ಲಿ ಗಸ್ತು ತಿರುಗಲಿವೆ.

ಒಟ್ಟಾರೆ ಇಂದು ದೇಶದ ಕೇಂದ್ರ ಬಿಂದುವಾಗಿರುವ ದೆಹಲಿ 7 ಸುತ್ತಿನ ಕೋಟೆಯಾಗಿ ಮಾರ್ಪಟ್ಟಿದ್ದು, ದೆಹಲಿ ಮಾತ್ರವಲ್ಲದೇ ದೇಶದ ಪ್ರಮುಖ ನಗರಗಳು ಹಾಗೂ ರಾಜಧಾನಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT