ಪ್ರಣಬ್ ಮುಖರ್ಜಿ 
ದೇಶ

ಐಐಟಿ ಖರಗಪುರ್ ಪ್ರಾಧ್ಯಾಪಕನ ಕಡ್ಡಾಯ ನಿವೃತ್ತಿ ರದ್ದುಗೊಳಿಸಿದ ಪ್ರಣಬ್ ಮುಖರ್ಜಿ

ಐಐಟಿ ಪ್ರವೇಶ ಪರೀಕ್ಷೆಯಲ್ಲಿ ದೋಷಗಳನ್ನು ಬಹಿರಂಗಪಡಿಸಿದ್ದ ಐಐಟಿ ಖರಗಪುರ್ ಪ್ರಾಧ್ಯಾಪಕ ರಾಜೀವ್ ಕುಮಾರ್ ಅವರು ಕಡ್ಡಾಯ...

ನವದೆಹಲಿ: ಐಐಟಿ ಪ್ರವೇಶ ಪರೀಕ್ಷೆಯಲ್ಲಿ ದೋಷಗಳನ್ನು ಬಹಿರಂಗಪಡಿಸಿದ್ದ ಐಐಟಿ ಖರಗಪುರ್ ಪ್ರಾಧ್ಯಾಪಕ ರಾಜೀವ್ ಕುಮಾರ್ ಅವರು ಕಡ್ಡಾಯ ನಿವೃತ್ತಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರದ್ದುಗೊಳಿಸಿದ್ದಾರೆ.
ರಾಷ್ಟ್ರಪತಿ ಭವನದಿಂದ ನಿರ್ಗಮಿಸುವ ಕೊನೆ ಗಳಿಯಲ್ಲಿ ಸೌಜನ್ಯ ತೊರಿರುವ ಪ್ರಣಬ್ ಮುಖರ್ಜಿ ಅವರು ರಾಜೀವ್ ಕುಮಾರ್ ಅವರು, ಕುಮಾರ್ ಮೇಲೆ ವಿಧಿಸಿದ ದಂಡವನ್ನು ಮುಂದೂಡಲು ಆದೇಶಿಸಿದ್ದಾರೆ.
ಈ ಸಂಬಂಧ ಕಳೆದ ವಾರ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಐಐಟಿ ಖರಗಪುರ್ ನಿರ್ದೇಶಕರಿಗೆ ಆದೇಶ ನೀಡಿದ್ದು, ಅದರಲ್ಲಿ ಪ್ರಣಬ್ ಮುಖರ್ಜಿ ಅವರ ನಿರ್ಧಾರವನ್ನು ಉಲ್ಲೇಖಿಸಿದೆ.
ಪ್ರೊಫೆಸರ್ ರಾಜೀವ್ ಕುಮಾರ್ ಅವರು ಸೆಪ್ಟೆಂಬರ್ 3, 2014 ರಲ್ಲಿ ಸಲ್ಲಿಸಿದ ಮನವಿಯನ್ನು ಪರಿಗಣಿಸಿ, ಐಐಟಿ ಖರಗಪುರ್ ಸಂದರ್ಶಕರಾದ ಭಾರತದ ರಾಷ್ಟ್ರಪತಿಯಾಗಿ ನಾನು ಅವರ ಕಡ್ಡಾಯ ನಿವೃತ್ತಿಯ ದಂಡವನ್ನು ರದ್ದುಗೊಳಿಸಬೇಕು ಎಂದು ನಿರ್ದೇಶಿಸುತ್ತಿರುವುದಾಗಿ ಪ್ರಣಬ್ ಮುಖರ್ಜಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಕುಮಾರ್ ಅವರು ನಿರಾಕರಿಸಿದ್ದಾರೆ.
ಐಐಟಿ ಪ್ರವೇಶ ಪರೀಕ್ಷೆಯಲ್ಲಿನ ದೋಷಗಳನ್ನು ಮತ್ತು ಅಕ್ರಮಗಳನ್ನು ಬಹಿರಂಗಪಡಿಸುವ ಮೂಲಕ ಸಂಸ್ಥೆಯ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಾಜೀವ್ ಕುಮಾರ್ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT