ಆರ್ ಎಸ್ಎಸ್ ನಾಯಕ ರಾಕೇಶ್ ಸಿನ್ಹಾ 
ದೇಶ

ಸ್ವಾತಂತ್ರ್ಯ ದಿನಾಚರಣೆ ಇರುವುದು ಇಡೀ ರಾಷ್ಟ್ರಕ್ಕೆ, ನಿರ್ದಿಷ್ಟ ರಾಜಕೀಯ ಪಕ್ಷಕ್ಕಲ್ಲ: ಆರ್ ಎಸ್ಎಸ್

ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶಕ್ಕೆ ಆಚರಿಸಲು ಇರುವುದೇ ಹೊರತು ಯಾವುದೇ ನಿರ್ದಿಷ್ಟ...

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ  ಇಡೀ ದೇಶಕ್ಕೆ ಆಚರಿಸಲು ಇರುವುದೇ ಹೊರತು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಅಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೇಳಿದೆ.
ಆರ್ಎಸ್ಎಸ್ ನಾಯಕ ರಾಕೇಶ್ ಸಿನ್ಹಾ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಕೇರಳದಲ್ಲಿ ಕಮ್ಯೂನಿಸ್ಟ್ ಸರ್ಕಾರ ತಡೆಯೊಡ್ಡಿದರೂ ಕೂಡ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶಾಲೆಯೊಂದರಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು.ಸ್ವಾತಂತ್ರ್ಯ ಚಳವಳಿಯೆಂಬುದು ರಾಷ್ಟ್ರೀಯ ಹಬ್ಬ. ಇದು ಸಂಪ್ರದಾಯವಲ್ಲ ಅಥವಾ ರಾಜ್ಯದ ಹಬ್ಬವಲ್ಲ. ಸ್ವಾತಂತ್ರ್ಯ ದಿನಾಚರಣೆಯಿರುವುದು ಇಡೀ ದೇಶಕ್ಕೆ ಹೊರತು ನಿರ್ದಿಷ್ಟ ರಾಜಕೀಯ ಪಕ್ಷಕ್ಕಲ್ಲ ಎಂದು ಹೇಳಿದರು.
ಆರ್ಎಸ್ಎಸ್ ಕಳೆದ 90 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಅದರ ಉದ್ದೇಶ ಒಂದೇ, ಎಲ್ಲಾ ಆಯಾಮಗಳಲ್ಲಿನ ಜನರು ಜಾತಿವಾದ ಮತ್ತು ಉದಾರವಾದದಿಂದ ದೂರವಿರಬೇಕು ಎಂಬುದಾಗಿದೆ ಎಂದರು.
ಆರ್ಎಸ್ಎಸ್ ಹಿರಿಯ ನಾಯಕ ಎಂ.ಜಿ.ವೈದ್ಯ, ಕೇರಳದಲ್ಲಿ ಕಮ್ಯೂನಿಸ್ಟ್ ಸರ್ಕಾರವಿದ್ದು, ಕಮ್ಯುನಿಸಂ ಇರುವ ಜಾಗದಲ್ಲಿ ಇತರ ತತ್ವ, ಸಿದ್ದಾಂತಗಳಿಗೆ ಪ್ರಾಮುಖ್ಯತೆ ನೀಡುವುದಿಲ್ಲ ಎಂದರು.
ಶಾಲೆಯಲ್ಲಿ ಧ್ವಜ ಹಾರಿಸಲು ಮೋಹನ್ ಭಾಗವತ್ ಅವರಿಗೆ ಆರಂಭದಲ್ಲಿ ಅನುಮತಿ ನೀಡಿರಲಿಲ್ಲ. ಆದರೆ ನಂತರ ಅವರು ಧ್ವಜ ಹಾರಿಸಿ ಬಂದಿದ್ದಾರೆ ಎಂದು ಗೊತ್ತಾಯಿತು. ಅವರು ತಮ್ಮ ತಪ್ಪನ್ನು ಅರ್ಥೈಸಿಕೊಂಡು ಕೊನೆಗೂ ಅವಕಾಶ ನೀಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಆರಂಭದಲ್ಲಿ ಭಾರೀ ವಿರೋಧದ ನಂತರ ಮೋಹನ್ ಭಾಗವತ್ ಅವರಿಗೆ ಕೇರಳದ ಕರ್ನಕ್ಕಿಯಮನ್ ಶಾಲೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಇಂದು 71ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲು ಅವಕಾಶ ನೀಡಲಾಯಿತು.
ಇದಕ್ಕೂ ಮುನ್ನ ಜಿಲ್ಲಾಡಳಿತ ಶಾಲೆಗೆ ಮೆಮೊ ಹೊರಡಿಸಿ, ಅನುದಾನಿತ ಶಾಲೆಯಲ್ಲಿ ರಾಜಕೀಯ ವ್ಯಕ್ತಿ ತ್ರಿವರ್ಣ ಧ್ವಜ ಹಾರಿಸುವುದು ಸೂಕ್ತವಲ್ಲ. ಶಾಲೆಯ ಅಧ್ಯಾಪಕರು ಅಥವಾ ಚುನಾಯಿತ ಪ್ರತಿನಿಧಿಗಳು ಮಾತ್ರ ತ್ರಿವರ್ಣ ಧ್ವಜ ಹಾರಿಸಬಹುದೆಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT