ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ 
ದೇಶ

ಬಿಹಾರ: ಸುಶೀಲ್ ಕುಮಾರ್ ಮೋದಿ ಕಾರಿನ ಮೇಲೆ ದಾಳಿ, ನಮ್ಮ ಕೈವಾಡವಿಲ್ಲ ಎಂದ ಲಾಲೂ

ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರ ಕಾರಿನ ಮೇಲೆ ಅನಾಮಧೇಯ ವ್ಯಕ್ತಿಗಳು ದಾಳಿ ಮಾಡಿದ್ದು, ಕೂದಲೆಲೆ ಅಂತರದಲ್ಲಿ ಪಾರಾಗಿದ್ದಾರೆಂದು...

ಪಾಟ್ನ: ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರ ಕಾರಿನ ಮೇಲೆ ಅನಾಮಧೇಯ ವ್ಯಕ್ತಿಗಳು ದಾಳಿ ಮಾಡಿದ್ದು, ಕೂದಲೆಲೆ ಅಂತರದಲ್ಲಿ ಪಾರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.
 ಬೀಹಾರ ರಾಜ್ಯದ ವೈಶಾಲಿ ಜಿಲ್ಲೆಯ ಕಾಲಾ ಪಹರ್ ಗ್ರಾಮದಲ್ಲಿ ಸುಶೀಲ್ ಕುಮಾರ್ ಮೋದಿಯವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅನಾಮಧೇಯ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ
ಸುಶೀಲ್ ಮೋದಿಯವರ ಕಾರು ಹೋಗುವುದಕ್ಕೂ ಮುನ್ನ ಇದೇ ರಸ್ತೆಯಲ್ಲಿ ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಪ್ರಸಾದ್ ಯಾದವ್ ಅವರ ಕಾರು ತೆರಳಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ಸುಶೀಲ್ ಮೋದಿಯವರ ಕಾರು ತೆರಳುತ್ತಿತ್ತು. ಹೀಗಾಗಿ ದಾಳಿ ಹಿಂದೆ ಆರ್'ಜೆಡಿ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. 
ಇದೀಗ ಆರೋಪಗಳನ್ನು ತಿರಸ್ಕರಿಸಿರುವ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು, ಸುಶೀಲ್ ಕುಮಾರ್ ಮೋದಿಯವರ ಕಾರಿನ ಮೇಲೆ ದಾಳಿ ಪ್ರಕರಣದಲ್ಲಿ ಪಕ್ಷದ ಯಾವುದೇ ಕಾರ್ಯಕರ್ತರ ಕೈವಾಡವಿಲ್ಲ ಎಂದು ಹೇಳಿದ್ದಾರೆ. 
ಆರ್'ಜೆಡಿ ಕಾರ್ಯಕರ್ತರು ಹಿಂಸಾಚಾರವನ್ನು ನಂಬುವುದಿಲ್ಲ. ರಾಜಕೀಯ ಲಾಭ ಪಡೆಯುವ ಸಲುವಾಗಿ ಸುಶೀಲ್ ಕುಮಾರ್ ಮೋದಿಯವರು ತಮ್ಮ ಬೆಂಬಲಿಗರ ಸಹಾಯದಿಂದ ಕಥೆ ಕಟ್ಟುತ್ತಿದ್ದಾರೆ. ಈ ರೀತಿಯ ನಾಟಕಗಳನ್ನು ಮಾಡುವುದರಲ್ಲಿ ಬಿಜೆಪಿ ಎತ್ತಿದ ಕೈ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿರುವ ಅವರು, ತೇಜಸ್ವಿ ಯಾದವ್ ಅವರು ಹೋಗಿದ್ದ ರಸ್ತೆಯಲ್ಲಿಯೇ ಸುಶೀಲ್ ಕುಮಾರ್ ಮೋದಿಯವರನ್ನೇಕೆ ಅಧಿಕಾರಿಗಳು ಕರೆದುಕೊಂಡು ಹೋಗಿದ್ದರು? ಪರ್ಯಾಯ ರಸ್ತೆಗಳನ್ನು ಬಳಕೆ ಮಾಡಿಕೊಂಡು ಕರೆದುಕೊಂಡು ಹೋಗಬಹುದಿತ್ತು. ಹಗರಣಗಳಲ್ಲಿ ಸುಶೀಲ್ ಕುಮಾರ್ ಮೋದಿಯವರ ಹೆಸರು ಕೇಳಿಬಂದಿದ್ದು, ಇದೀಗ ಜನರ ಗಮನವನ್ನು ಬೇರೆಡೆ ಸೆಳೆಯುವ ಸಲವಾಗಿ ಈ ರೀತಿಯ ಯತ್ನಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ಅಚುತಾನಂದ್ ಸಿಂಗ್ ಅವರ ತಾಯಿಯವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಲವಾಗಿ ಸುಶೀಲ್ ಕುಮಾರ್ ಮೋದಿಯವರು ತೆರಳುತ್ತಿದ್ದರು ಈವೇಳೆ ಅನಾಮಧೇಯ ವ್ಯಕ್ತಿಗಳು ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ತಿಳಿದುಬಂದಿದೆ. 
ಘಟನೆಯಲ್ಲಿ ಸುಶೀಲ್ ಕುಮಾರ್ ಮೋದಿಯವರ ಕಾರಿನ ಗಾಜು ಪುಡಿಪುಡಿಯಾಗಿದ್ದು, ಕೂದಲೆಳೆ ಅಂತರದಲ್ಲಿ ಉಪ ಮುಖ್ಯಮಂತ್ರಿಗಳು ಪಾರಾಗಿದ್ದಾರೆ, ದಾಳಿ ಬಳಿಕ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT