ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ 
ದೇಶ

ತ್ರಿಪುರಾ ಸಿಎಂ ಭಾಷಣ ಪ್ರಸಾರಕ್ಕೆ ಎಐಆರ್, ಡಿಡಿ ನಕಾರ: ವಿವಾದ

: ಸ್ವಾತಂತ್ರ್ಯೋ ದಿನದ ನಿಮಿತ್ತ ಎಡರಂಗ ಮುಖಂಡ ಹಾಗೂ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ ಅವರ ಭಾಷಣವನ್ನು ಪ್ರಸಾರ ಮಾಡಲು ಕೇಂದ್ರ ಸರ್ಕಾರಿ ಸ್ವಾಮ್ಯದ ದೂರದರ್ಶನ ಹಾಗೂ ಆಕಾಶವಾಣಿ...

ನವದೆಹಲಿ: ಸ್ವಾತಂತ್ರ್ಯೋ ದಿನದ ನಿಮಿತ್ತ ಎಡರಂಗ ಮುಖಂಡ ಹಾಗೂ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರ ಭಾಷಣವನ್ನು ಪ್ರಸಾರ ಮಾಡಲು ಕೇಂದ್ರ ಸರ್ಕಾರಿ ಸ್ವಾಮ್ಯದ ದೂರದರ್ಶನ ಹಾಗೂ ಆಕಾಶವಾಣಿ ನಿರಾಕರಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ಹಾಗೂ ಸಿಪಿಎಂ ಆರೋಪ ಮಾಡಿದೆ. 
ಆ.15ರಂದು ಪ್ರಸಾರ ಆಗಬೇಕಿದ್ದ ಭಾಷಣವನ್ನು 12ನೇ ತಾರೀಖಿಗೇ ಧ್ವನಿಮುದ್ರಿಸಲಾಗಿತ್ತು. ಆದರೆ, 14ರಂದು ಸಂಜೆ 7ಕ್ಕೆ ಈ ಭಾಷಣವನ್ನು ತಿದ್ದುಪಡಿ ಮಾಡಿ, ಇಲ್ಲದಿದ್ದರೆ ಪ್ರಸಾರ ಮಾಡಲಾಗದು' ಎಂಬ ಸಂದೇಶ ಬಂತೆಂದು ಸಿಪಿಎಂ ಆರೋಪಿಸಿದೆ. 
ದೂರದರ್ಶನ ಹಾಗೂ ಎಐಆರ್ ನ ಈ ಪ್ರತಿಕ್ರಿಯೆಗೆ ಮುಖ್ಯಮಂತ್ರಿಗಳ ಕಚೇರಿ ತೀವ್ರವಾಗಿ ಕಿಡಿಕಾರಿದ್ದು ,ಭಾಷಣದ ಒಂದು ಪದವನ್ನೂ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದೆ. 
ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿಯವರು, ದೂರದರ್ಶನ ಹಾಗೂ ಎಐಆರ್ ಏನು ಬಿಜೆಪಿ-ಆರ್'ಎಸ್ಎಸ್'ನವರ ಖಾಸಗಿ ಆಸ್ತಿಯಲ್ಲ. ವಿರೋಧಪಕ್ಷಗಳು ಹಾಗೂ ಆಯ್ಕೆಗೊಂಡ ಮುಖ್ಯಮಂತ್ರಿಗಳೂ ಸೇರಿದಂತೆ ಎಲ್ಲರ ದನಿ ಹತ್ತಿಕ್ಕಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಆಪ್ತರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭಾಷಣ ಪ್ರಸಾರ ಮಾಡಲು ದೂರದರ್ಶನ ಹಾಗೂ ಎಐಆರ್ ನಿರಾಕರಿಸುವುದನ್ನು ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ವಿವಾದ ಸಂಬಂಧ ದೂರದರ್ಶನವಾಗಲೀ ಅಥವಾ ಎಐಆರ್ ಆಗಲೀ ಈ ವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT