ಸಂಗ್ರಹ ಚಿತ್ರ 
ದೇಶ

ರೂ.57,000 ಮೌಲ್ಯದ ಟೊಮೆಟೋ ಕಳ್ಳತನ: ವ್ಯಕ್ತಿ ಬಂಧನ

ದೇಶದಾದ್ಯಂತ ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮೆಟೋಗೆ ಇದೀಗ ಚಿನ್ನದ ಬೆಲೆ ಬಂದಂತಾಗಿದೆ. ಇಷ್ಟು ದಿನ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಟೊಮೆಟೋ...

ಮುಂಬೈ: ದೇಶದಾದ್ಯಂತ ಟೊಮೆಟೋ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮೆಟೋಗೆ ಇದೀಗ ಚಿನ್ನದ ಬೆಲೆ ಬಂದಂತಾಗಿದೆ. ಇಷ್ಟು ದಿನ ಚಿನ್ನದ ಅಂಗಡಿಗಳಿಗೆ ನುಗ್ಗಿ ದರೋಡೆ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಟೊಮೆಟೋ ದರೋಡೆ ಮಾಡುವ ವೃತ್ತಿಗೆ ಇಳಿದಿದ್ದಾರೆ. 
ರೂ.57,000 ಮೌಲ್ಯದ ಟೊಮೆಟೋ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 54 ವರ್ಷದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ರಾಧೆಶ್ಯಾಮ್ ಗುಪ್ತಾ (54) ಬಂಧಿತ ವ್ಯಕ್ತಿಯಾಗಿದ್ದಾನೆ. ಜುಲೈ.18 ರಕಂದು ಮುಂಬೈನ ತರಕಾರಿ ಮಾರುಕಟ್ಟೆಯೊಂದರಲ್ಲಿ ಅಂಗಡಿಯೊಂದರಲ್ಲಿ ರೂ.57,000 ಮೌಲ್ಯದ 900 ಕೆಜಿ ತರಕಾರಿಗಳು ದರೋಡೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದರು. 
ಇದರಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಹಲವು ಅಂಗಡಿ ಮಾಲೀಕರನ್ನು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಅಂಗಡಿ ಮಾಲೀಕರು ನೀಡಿದ ಮಾಹಿತಿ ಮೇರೆಗೆ ರಾಧೆಶ್ಯಾಮ್ ನನ್ನು ಪೊಲೀಸರು ನಿನ್ನೆ ಸಂಜೆ ಬಂಧನಕ್ಕೊಳಪಡಿಸಿದ್ದಾರೆ. 
ಗುಪ್ತಾ ವಿರುದ್ಧ ಸೆಕ್ಷನ್ 379 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ಆ.18 ವರೆಗೂ ಪೊಲೀಸ್ ವಶಕ್ಕೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT