ಛತ್ತೀಸ್ಗಢ: ಬಿಜೆಪಿ ನಾಯಕನ ಮಾಲೀಕತ್ವದ ಗೋಶಾಲೆಯಲ್ಲಿ 150 ಹಸುಗಳ ಸಾವು 
ದೇಶ

ಛತ್ತೀಸ್ಗಢ: ಬಿಜೆಪಿ ನಾಯಕನ ಮಾಲೀಕತ್ವದ ಗೋಶಾಲೆಯಲ್ಲಿ 150 ಹಸುಗಳ ಸಾವು

ಬಿಜೆಪಿ ನಾಯಕನ ಮಾಲೀಕತ್ವದಲ್ಲಿ ನಡೆಸಲಾಗುತ್ತಿದ್ದ ಗೋಶಾಲೆಯೊಂದರಲ್ಲಿ ಸೂಕ್ತ ಆರೈಕೆ ಹಾಗೂ ಹಸಿವಿನಿಂದಾಗಿ 150 ಹಸುಗಳು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ...

ರಾಯ್ಬುರ; ಬಿಜೆಪಿ ನಾಯಕನ ಮಾಲೀಕತ್ವದಲ್ಲಿ ನಡೆಸಲಾಗುತ್ತಿದ್ದ ಗೋಶಾಲೆಯೊಂದರಲ್ಲಿ ಸೂಕ್ತ ಆರೈಕೆ ಹಾಗೂ ಹಸಿವಿನಿಂದಾಗಿ 150 ಹಸುಗಳು ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. 
ಛತ್ತೀಸ್ಗಢ ದುರ್ಗ್ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಗೋಶಾಲೆಯಲ್ಲಿ ಒಟ್ಟು 150 ಹಸುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. 
ಗೋಶಾಲೆಯಲ್ಲಿ ಹಸುಗಳಉ ಸಾವನ್ನಪ್ಪುತ್ತಿರುವುದಾಗಿ ಕೆಲ ಸ್ಥಳೀಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ದೂರು ನೀಡಿದ್ದರು. ದೂರಿನ ಅನ್ವಯ ಜಿಲ್ಲಾ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ರಾಜೇಶ್ ಪಾತ್ರೆಯವರು ಬಿಜೆಪಿ ನಾಯಕ ಹರೀಶ್ ವರ್ಮಾ ಪಾತ್ರೆ ಮಾಲೀಕತ್ವದ ಗೋಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಹಸಿವು ಹಾಗೂ ಸೂಕ್ತ ಆರೈಕೆಗಳಿಲ್ಲದೆಯೇ 150 ಹಸುಗಳು ಸಾವನ್ನಪ್ಪಿವೆ ಎಂದು ದೃಢೀಕರಿಸಿದ್ದಾರೆ. 
ಪ್ರಕರಣ ಸಂಬಂಧ ತನಿಖೆಗಾಗಿ ಪ್ರಾಣಿ ಸಂಗೋಪನೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ಸದಸ್ಯರ ತಂಡವೊಂದನ್ನು ನೇಮಿಸಲಾಗಿದೆ. ಹಸುಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಹಸುಗಳ ಮಾರಣಹೋಮಕ್ಕೆ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT