ಸಂಗ್ರಹ ಚಿತ್ರ 
ದೇಶ

ಭಾರತೀಯ ಸೇನೆಯ ಬತ್ತಳಿಕೆ ಸೇರಲಿವೆ ಅಮೆರಿಕದ ವಿಧ್ವಂಸಕ 6 ಆಪಾಚೆ ಹೆಲಿಕಾಪ್ಟರ್!

ಅಮೆರಿಕ ಸೇನೆಯ ಪ್ರಮುಖ ಅಸ್ತ್ರಗಳಲ್ಲಿ ಒಂದಾಗಿರುವ ವಿಧ್ವಂಸಕ ದಾಳಿ ಸಾಮರ್ಥ್ಯದ ಆಪಾಚೆ ಹೆಲಿಕಾಪ್ಟರ್ ಗಳು ಶೀಘ್ರ ಭಾರತದ ಬತ್ತಳಿಕೆ ಸೇರಿಲಿದ್ದು, 6 ಆಪಾಚೆ ಹೆಲಿಕಾಪ್ಟರ್ ಗಳ ಖರೀದಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ಗುರುವಾರ ನೀಡಿದೆ.

ನವದೆಹಲಿ: ಅಮೆರಿಕ ಸೇನೆಯ ಪ್ರಮುಖ ಅಸ್ತ್ರಗಳಲ್ಲಿ ಒಂದಾಗಿರುವ ವಿಧ್ವಂಸಕ ದಾಳಿ ಸಾಮರ್ಥ್ಯದ ಆಪಾಚೆ ಹೆಲಿಕಾಪ್ಟರ್ ಗಳು ಶೀಘ್ರ ಭಾರತದ ಬತ್ತಳಿಕೆ ಸೇರಿಲಿದ್ದು, 6 ಆಪಾಚೆ ಹೆಲಿಕಾಪ್ಟರ್ ಗಳ ಖರೀದಿ ಒಪ್ಪಂದಕ್ಕೆ ಕೇಂದ್ರ  ಸರ್ಕಾರ ಅನುಮೋದನೆ ಗುರುವಾರ ನೀಡಿದೆ.

ಅಮೆರಿಕದ ಖ್ಯಾತ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ಸಂಸ್ಥೆ ಈ ಅಪಾಚೆ ಹೆಲಿಕಾಪ್ಟರ್ ಗಳನ್ನು ತಯಾರಿಸುತ್ತಿದ್ದು, ಈ ಹಿಂದಿನ ಒಪ್ಪಂದದಂತೆ ಭಾರತಕ್ಕೆ 6 ಅಪಾಚೆ ಎಎಚ್64 ಇ ದಾಳಿ ಹೆಲಿಕಾಪ್ಟರ್ ಗಳನ್ನು ಮಾರಾಟ  ಮಾಡಲು ಮುಂದಾಗಿದೆ. ನಿನ್ನೆಯಷ್ಟೇ ಕೇಂದ್ರ ಸರ್ಕಾರ ಕೂಡ ಬೋಯಿಂಗ್ ಸಂಸ್ಥೆಯೊಂದಿಗಿನ ಒಪ್ಪಂದಕ್ಕೆ ಅನುಮೋದನೆ ನೀಡಿದ್ದು, 6 ಅಪಾಚೆ ಎಎಚ್64 ಇ ಹೆಲಿಕಾಪ್ಟರ್ ಗಳನ್ನು ಖರೀದಿಸುವ ರಕ್ಷಣಾ ಇಲಾಖೆಯ ಪ್ರಸ್ತಾವಕ್ಕೆ  ಅನುಮೋದನೆ ನೀಡಿದೆ.

ಅಪಾಚೆ ಎಎಚ್64 ಇ ದಾಳಿ ಹೆಲಿಕಾಪ್ಟರ್ ನಿರ್ಮಾಣ ಮಾಡುತ್ತಿರುವ ಬೋಯಿಂಗ್ ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ ಸುಮಾರು 4,168 ಕೋಟಿ ರು.ಗಳ ಒಪ್ಪಂದ ಮಾಡಿಕೊಂಡಿದ್ದು, ಇಂತಹ ಆರು ಹೆಲಿಕಾಪ್ಟರ್ ಗಳನ್ನು ಖರೀದಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ರಕ್ಷಣಾ ಇಲಾಖೆ ಸರ್ಕಾರಕ್ಕೆ ನೀಡಿದ್ದ  ಬೇಡಿಕೆಯ ಪಟ್ಟಿಯಲ್ಲಿ ಆಪಾಚೆ ಹೆಲಿಕಾಪ್ಟರ್ ಗಳ ಖರೀದಿ ಪ್ರಸ್ತಾಪ ಕೂಡ ಇತ್ತು ಎಂದು ಹೇಳಲಾಗಿದೆ. ಹಲವು ವರ್ಷಗಳ ಹಿಂದೆಯೇ ಸೇನೆ ಈ ಬಗ್ಗೆ ಕೇಂದ್ರಸರ್ಕಾರದ ಗಮನಕ್ಕೆ ತಂದಿತ್ತು. ಆದರೆ ದೇಶೀಯ ಯುದ್ಧ ಹೆಲಿಕಾಪ್ಟರ್  ಗಳ ಬಳಕೆಗೆ ಮುಂದಾಗಿದ್ದ ವಾಯುಸೇನೆ ಈ ಖರೀದಿಗೆ ವಿರೋಧ ವ್ಯಕ್ಚಪಡಿಸಿತ್ತು. ಇದೀಗ ಚೀನಾ-ಭಾರತ ನಡುವಿನ ಡೊಕ್ಲಾಮ್ ವಿವಾದ ತಾರಕಕ್ಕೇರಿರುವಂತೆಯೇ ಅಪಾಚೆ ಹೆಲಿಕಾಪ್ಟರ್ ಗಳ ಖರೀದಿಗೆ ಕೇಂದ್ರ ಮುಂದಾಗಿದೆ.

ರಕ್ಷಣಾ ಸಚಿವ ಅರುಣ್ ಜೇಟ್ಲಿ ನೇತೃತ್ವದ ರಕ್ಷಣಾ ಖರೀದಿ ಮಂಡಳಿ 6 ಹೆಲಿಕಾಪ್ಟರ್ ಖರೀದಿ ಶಿಫಾರಸಿಗೆ ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು ತಿಳಿಸಿವೆ. ಸೇನೆಗೆ ಹಲವು ದಾಳಿ ಹೆಲಿಕಾಪ್ಟರ್‌ಗಳ ಅಗತ್ಯತೆ ಇತ್ತು.  ಆದುದರಿಂದ ಎರಡು ವರ್ಷಗಳ ಹಿಂದೆ 39 ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಬಯಸಿತ್ತು. ಬೋಯಿಂಗ್ ಅಂತಾರಾಷ್ಟ್ರೀಯ ಗ್ರಾಹಕರಿಗೆ ಈ ವರೆಗೂ 2,200ಕ್ಕೂ ಅಧಿಕ ಅಪಾಚೆ ಹೆಲಿಕಾಪ್ಟರ್ ಗಳನ್ನು ಪೂರೈಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ- ಪಾಕ್ ಗೆ ಭಾರತದ ತಿರುಗೇಟು!

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಡಿ.ಕೆ ಶಿವಕುಮಾರ್ ಭೇಟಿ; ಡಿಸಿಎಂ ಹೇಳಿದ್ದೇನು? Video

ಬೆಂಗಳೂರು: ಕಿರುತೆರೆ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಮಾದಕ ವಸ್ತು ತಡೆ: ನಿರ್ಲಕ್ಷ್ಯಕ್ಕಾಗಿ ಮೂವರು ಇನ್ಸ್‌ಪೆಕ್ಟರ್‌ಗಳ ಅಮಾನತು

ಲಂಕಾ ಹನಿಮೂನ್ ನಲ್ಲಿ 'ಹಳೇ ಲವರ್' ವಿಚಾರಕ್ಕೆ ಜಗಳ! ನವದಂಪತಿ ಸೂಸೈಡ್ ಗೆ ಇದೇ ಕಾರಣನಾ? ಕಣ್ಣೀರಿನಲ್ಲಿ ಮುಳುಗಿದ ಕುಟುಂಬ!

SCROLL FOR NEXT