ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಇಬ್ಬರು ಬಿಜೆಪಿ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ರೈಲು ಸೇವೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಉತ್ತರ ಪ್ರದೇಶದ ಇಬ್ಬರು ಬಿಜೆಪಿ....

ಮುಜಾಫರ್ ನಗರ: ರೈಲು ಸೇವೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಉತ್ತರ ಪ್ರದೇಶದ ಇಬ್ಬರು ಬಿಜೆಪಿ ಶಾಸಕರಿಗೆ ಇಲ್ಲಿನ ಸ್ಥಳೀಯ ಕೋರ್ಟ್ ಶನಿವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ಪದೇಪದೆ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಮುಜಾಫರ್ ನಗರ ಕ್ಷೇತ್ರದ ಶಾಸಕ ಕಪಿಲ್ ಅಗರವಾಲ್ ಹಾಗೂ ಬುಧಾನ ಕ್ಷೇತ್ರದ ಶಾಸಕ ಉಮೇಶ್ ಮಲಿಕ್ ಅವರ ವಿರುದ್ಧ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಗೋಪಾಲ್ ತಿವಾರಿ ಅವರು ಇಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರು ಆರೋಪಿ ಶಾಸಕರನ್ನು ಬಂಧಿಸಿ ಸೆಪ್ಟೆಂಬರ್ 30ರಂದು ಕೋರ್ಟ್ ಗೆ ಹಾಜರುಪಡಿಸುವಂತೆ ಪೊಲೀಸರಿಗೆ ತಿವಾರಿ ಅವರು ಸೂಚಿಸಿದ್ದಾರೆ.
ಏಪ್ರಿಲ್ 3, 2012ರಂದು ರೈಲು ಸೇವೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ರೈಲ್ವೆ ಪೊಲೀಸರು ಇಬ್ಬರು ಶಾಸಕರು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT