ಓ. ಪನ್ನೀರ್ ಸೆಲ್ವಂ 
ದೇಶ

ಎಐಎಡಿಎಂಕೆ ವಿಲೀನದ ಬಗ್ಗೆ ಒಂದೆರಡು ದಿನಗಳಲ್ಲಿ ಮಹತ್ವದ ತೀರ್ಮಾನ: ಪನ್ನೀರ್ ಸೆಲ್ವಂ

ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ವಿಲೀನ ಸಂಬಂಧ ಇನ್ನು ಒಂದೆರು ದಿನಗಳಲ್ಲಿ ಧನಾತ್ಮಕ ಫಲಿತಾಂಶ ಹೋರಬೀಳಲಿದೆ ...

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ವಿಲೀನ ಸಂಬಂಧ ಇನ್ನು ಒಂದೆರು ದಿನಗಳಲ್ಲಿ ಧನಾತ್ಮಕ ಫಲಿತಾಂಶ ಹೋರಬೀಳಲಿದೆ ಎಂದು ಮಾಜಿ ಸಿಎಂ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಎಐಎಡಿಎಂಕೆ ಪರುತ್ಚಿ ತಲೈವಿ ಅಮ್ಮಾ ಮುಖಂಡರ ಭೇಟಿಯ ನಂತರ ಮಾತನಾಡಿದ ಪನ್ನೀರ್ ಸೆಲ್ವಂ, ಮಾತುಕತೆಗಳು ಸುಗಮವಾಗಿ ನಡೆದಿವೆ, ವಿಲೀನಕ್ಕೆ ಸಂಬಂಧಿಸಿದಂತೆ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಲು ನಾಳೆ ಮಧುರೈಗೆ ತೆರಳಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಉತ್ತಮ ಫಲಿತಾಂಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸಿಎಂ ಕೆ, ಪಳನಿಸ್ವಾಮಿ ಎಂಜಿಆರ್  ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತಂಜಾವೂರಿನ ತಿರುವ್ವೂರ್ ಗೆ ತೆರಳಿದ್ದಾರೆ. 
ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಒಮ್ಮತ ಮೂಡದ ಕಾರಣ ಬಹು ನಿರೀಕ್ಷಿತ ವಿಲೀನ ಪ್ರಕ್ರಿಯೆ ತಡವಾಗಿದೆ. ಪಳನಿಸ್ವಾಮಿ  ಬಣದ ಶಾಸಕರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುವ ಕುರಿತು ಪಟ್ಟು ಹಿಡಿಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 
ಇದೇ ವೇಳೆ ಎಐಎಡಿಎಂಕೆ ಯಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಕೂಡ ತಮ್ಮ ಮನೆಯಲ್ಲಿ ಬೆಂಬಲಿಗರೊಂದಿಗೆ ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT