ಹಳಿ ತಪ್ಪಿದ ರೈಲಿನ ಬೋಗಿಗಳು 
ದೇಶ

ಉತ್ತರ ಪ್ರದೇಶ: ಹಳಿ ತಪ್ಪಿದ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲು, 20 ಮಂದಿ ಸಾವಿನ ಶಂಕೆ, 70 ಪ್ರಯಾಣಿಕರಿಗೆ ಗಾಯ

ಉತ್ತರ ಪ್ರದೇಶದ ಮುಜಾಫರ್ ನಗರದ ಬಳಿ ಪುರಿ-ಹರಿದ್ವಾರ-ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲಿನ ಆರು ಬೋಗಿಗಳು ಶನಿವಾರ...

ಲಖನೌ: ಉತ್ತರ ಪ್ರದೇಶದ ಮುಜಾಫರ್ ನಗರದ ಬಳಿ ಪುರಿ-ಹರಿದ್ವಾರ-ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಶನಿವಾರ ಹಳಿ ತಪ್ಪಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಮತ್ತು 70ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಒಡಿಶಾದ ಪುರಿಯಿಂದ ಉತ್ತರಖಂಡ್ ನ ಹರಿದ್ವಾರಕ್ಕೆ ತೆರಳುತ್ತಿದ್ದ ರೈಲು ಇಂದು ಸಂಜೆ 5.45ರ ಸುಮಾರಿಗೆ ಮುಜಾಫರ್ ನಗರ ಜಿಲ್ಲೆಯ ಖತೌಲಿ ರೈಲ್ವೆ ನಿಲ್ದಾಣದ ಸಮೀಪ ಹಳಿ ತಪ್ಪಿದ್ದು, ಘಟನೆಯಲ್ಲಿ ಕೆಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಆದರೆ ಪೊಲೀಸ್ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ.
ಮೂಲಗಳ ಪ್ರಕಾರ, ಹಳಿ ತಪ್ಪಿದ ಕೆಲವು ಬೋಗಿಗಳು ಪಕ್ಕದ ಮನೆಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರಿಗೆ ಮತ್ತು ಆಸ್ತಿ ಪಾಸ್ತಿಗೆ ಸಾಕಷ್ಟು ಹಾನಿಯಾಗಿದೆ ಎನ್ನಲಾಗಿದೆ.
ರೈಲ್ವೆ ಇಲಾಖೆ ಸಿಬ್ಬಂದಿ, ಪೊಲೀಸರು ಹಾಗೂ ವೈದ್ಯಕೀಯ ತಂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಗಾಯಾಳುಗಳನ್ನು ಮೀರತ್, ಸಹರನಾಪುರ್ ಮತ್ತು ಇತರೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT