ಮಧ್ಯರಾತ್ರಿ ಕಿರಣ್ ಬೇಡಿ ಬೈಕ್ ರೈಡ್: ನಗರ ಸುರಕ್ಷತೆ ಅರಿಯಲು ರಹಸ್ಯ ಸಂಚಾರ! 
ದೇಶ

ಮಧ್ಯರಾತ್ರಿ ಕಿರಣ್ ಬೇಡಿ ಬೈಕ್ ರೈಡ್: ನಗರ ಸುರಕ್ಷತೆ ಅರಿಯಲು ರಹಸ್ಯ ಸಂಚಾರ!

ರಾತ್ರಿಯ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಪೊಲೀಸರು ಗಸ್ತು ತಿರುಗುತ್ತಾರೆ. ಆದರೆ, ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಪುದುಚೇರಿ ಉಪರಾಜ್ಯಪಾಲೆ ಕಿರಣ್ ಬೇಡಿ, ಮಾರುವೇಷದಲ್ಲಿ ತಾವೇ ಸ್ವತಃ ಗಸ್ತು ತಿರುಗುವ ಮೂಲಕ ಮಹಿಳೆಯರ...

ಪುದುಚೇರಿ; ರಾತ್ರಿಯ ವೇಳೆಯಲ್ಲಿ ಜನರ ಸುರಕ್ಷತೆಗಾಗಿ ಪೊಲೀಸರು ಗಸ್ತು ತಿರುಗುತ್ತಾರೆ. ಆದರೆ, ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಪುದುಚೇರಿ ಉಪರಾಜ್ಯಪಾಲೆ ಕಿರಣ್ ಬೇಡಿ, ಮಾರುವೇಷದಲ್ಲಿ ತಾವೇ ಸ್ವತಃ ಗಸ್ತು ತಿರುಗುವ ಮೂಲಕ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಂಡಿದ್ದಾರೆ. 
ಚೂಡಿದಾರ ತೊಟ್ಟು, ಮುಖವನ್ನು ದುಪ್ಪಟ್ಟಾದಿಂದ ಮುಚ್ಚಿಕೊಂಡು, ದ್ವಿಚಕ್ರ ವಾಹನವೊಂದರ ಹಿಂದೆ ಕುಳಿತು ಮಧ್ಯರಾತ್ರಿಯ ವೇಳೆ ಪುದುಚೇರಿಯ ರಸ್ತೆಗಳನ್ನು ಸುತ್ತಿದ್ದಾರೆ. 
ನಗರ ಸುರಕ್ಷತೆ ಅರಿಯಲು ರಹಸ್ಯ ಬೈಕ್ ನಲ್ಲಿ ರಹಸ್ಯ ಸಂಚಾರ ಮಾಡಿದ ಬಳಿಕ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಿರಣ್ ಬೇಡಿ, ಪುದುಚೇರಿ ಮಹಿಳೆಯರಿಗೆ ಸುರಕ್ಷಿತ ತಾಣವಾಗಿದೆ. ಆದರೆ, ಕೆಲವೊಂದು ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸರಿಗೆ ಸೂಚಿಸಲಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ ವ್ಯಾಪಾರ ಸಲಹೆಗಾರ ಪೀಟರ್ ನವರೊ!

SCROLL FOR NEXT