ಶಿವಾನಂದ ತಿವಾರಿ ಹಾಗೂ ಲಾಲು ಪ್ರಸಾದ್ ಯಾದವ್ 
ದೇಶ

ಉಚ್ಛಾಟಿತ ಜೆಡಿಯು ಮುಖಂಡ ಶಿವಾನಂದ ತಿವಾರಿ ಆರ್ ಜೆಡಿ ಉಪಾಧ್ಯಕ್ಷರಾಗಿ ಆಯ್ಕೆ!

ಬಿಹಾರ ರಾಜಕೀಯ ಶೀಥಲ ಸಮರ ಇನ್ನೂ ಮುಂದುವರೆದಿದ್ದು, ಇತ್ತೀಚೆಗಷ್ಟೇ ಜೆಡಿಯು ಪಕ್ಷದಿಂದ ಹೊರಬಿದಿದ್ದಿ ಮಾಜಿ ಸಂಸದ ಹಾಗೂ ಪಕ್ಷದ ಹಿರಿಯ ಮುಖಂಡ ಶಿವಾನಂದ ತಿವಾರಿ ಆರ್ ಜೆಡಿ ಪಕ್ಷ ಸೇರಿದ್ದು, ಅವರನ್ನು ಆರ್ ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಪಾಟ್ನಾ: ಬಿಹಾರ ರಾಜಕೀಯ ಶೀಥಲ ಸಮರ ಇನ್ನೂ ಮುಂದುವರೆದಿದ್ದು, ಇತ್ತೀಚೆಗಷ್ಟೇ ಜೆಡಿಯು ಪಕ್ಷದಿಂದ ಹೊರಬಿದಿದ್ದಿ ಮಾಜಿ ಸಂಸದ ಹಾಗೂ ಪಕ್ಷದ ಹಿರಿಯ ಮುಖಂಡ ಶಿವಾನಂದ ತಿವಾರಿ ಆರ್ ಜೆಡಿ ಪಕ್ಷ ಸೇರಿದ್ದು, ಅವರನ್ನು  ಆರ್ ಜೆಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಸ್ವತಃ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಾಹಿತಿ ನೀಡಿದ್ದು, ಶಿವಾನಂದ ತಿವಾರಿ ಅವರನ್ನು ಆರ್ ಜೆಡಿ ಪಕ್ಷದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಶಿವಾನಂದ ತಿವಾರಿ ಮತ್ತು ಜೆಡಿಯುನ ಇತರೆ ನಾಲ್ಕು ಸಂಸದರನ್ನು ಪಕ್ಷವಿರೋಧಿ ಚಟುವಟಿಕೆಯ ಆರೋಪದ ಮೇರೆಗೆ ನಿತೀಶ್ ಕುಮಾರ್ ಅವರು ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಜೆಡಿಯು ಮುಖ್ಯಸ್ಥ ಶರದ್  ಯಾದವ್ ಅವರ ಆಪ್ತರಲ್ಲಿ ಪ್ರಮುಖರಾಗಿದ್ದ ಶಿವಾನಂದ ತಿವಾರಿ ಅವರನ್ನು ಪಕ್ಷದಿಂದ ಹೊರ ಹಾಕುವ ಮೂಲಕ ನಿತೀಶ್ ಕುಮಾರ್ ಶರದ್ ಯಾದವ್ ಅವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದರು. ಇದೀಗ ಶಿವಾನಂದ್ ತಿವಾರಿ  ಆವರು ಆರ್ ಜೆಡಿ ಪಕ್ಷ ಸೇರಿದ್ದು, ಅವರಿಗೆ ಪಕ್ಷದ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT