ಸಂಗ್ರಹ ಚಿತ್ರ 
ದೇಶ

20 ನಿಮಿಷದಲ್ಲಿ ದುರಸ್ತಿ ಕಾರ್ಯ ನಡೆಸಿದ್ದರೆ, ದುರಂತ ತಪ್ಪಿಸಬಹುದಿತ್ತು: ಪ್ರಾಥಮಿಕ ವರದಿ

20 ನಿಮಿಷದಲ್ಲಿ ಹಳಿ ದುರಸ್ತಿ ಕಾರ್ಯ ನಡೆಸಿದ್ದರೆ 23 ಮಂದಿಯ ಸಾವಿಗೆ ಕಾರಣವಾದ ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತವನ್ನು ತಪ್ಪಿಸಬಹುದಿತ್ತು ಎಂದು ಪ್ರಾಥಮಿಕ ವರದಿ ಹೇಳಿದೆ.

ಮುಜಾಫರ ನಗರ: 20 ನಿಮಿಷದಲ್ಲಿ ಹಳಿ ದುರಸ್ತಿ ಕಾರ್ಯ ನಡೆಸಿದ್ದರೆ 23 ಮಂದಿಯ ಸಾವಿಗೆ ಕಾರಣವಾದ ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತವನ್ನು ತಪ್ಪಿಸಬಹುದಿತ್ತು ಎಂದು ಪ್ರಾಥಮಿಕ ವರದಿ ಹೇಳಿದೆ.

ಶನಿವಾರ ಸಂಜೆ ಸಂಭವಿಸಿದ್ದ ಕಳಿಂಗ-ಉತ್ಕಲ್ ಎಕ್ಸ್ ಪ್ರೆಸ್ ರೈಲು ದುರಂತ ಸಂಬಂಧ ಇಂದು ಪ್ರಾಥಮಿಕ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ವರದಿಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದಲೇ ದುರಂತ  ಸಂಭವಿಸಿರುವ ಕುರಿತು ಶಂಕೆ ವ್ಯಕ್ತಪಡಿಸಲಾಗಿದೆ. ಕಳಿಂಗ-ಉತ್ಕಲ್ ರೈಲು ಸಂಚರಿಸಬೇಕಿದ್ದ ಹಳಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕುರಿತು ರೈಲು ಚಾಲಕನಿಗೆ ಮಾಹಿತಿಯೇ ಇರಲಿಲ್ಲವಂತೆ. ಈ ಬಗ್ಗೆ ಚಾಲಕನಿಗೆ ನಿಯಂತ್ರಣ  ಕೊಠಡಿಯಿಂದ ಯಾವೊಬ್ಬ ಸಿಬ್ಬಂದಿಯಾಗಲಿ ಅಥವಾ ಅಧಿಕಾರಿಗಳಾಗಲಿ ಮಾಹಿತಿ ನೀಡಿರಲಿಲ್ಲ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಿಸಲಾಗಿದೆ.

ಉತ್ಕಲ್ ಎಕ್ಸ್ ಪ್ರೆಸ್ ರೈಲು ಬರುತ್ತಿದ್ದಾಗ 15 ಮೀಟರ್ ಉದ್ದದ ಹಳಿಯನ್ನು ತೆಗೆದು ಬೇರೆಯದನ್ನು ಜೋಡಿಸಲಾಗುತ್ತಿತ್ತು. ಅಷ್ಟರಲ್ಲಾಗಲೇ ರೈಲು ಆಗಮಿಸಿ ಬಿಟ್ಟಿತ್ತು. ಹೀಗಾಗಿ ಬೇರೆ ಯಾವುದೇ ಆಯ್ಕೆಗಳಿಲ್ಲದೆ ಪ್ರಾಣ ಉಳಿಸುವ  ಸಲುವಾಗಿ ಕಾರ್ಮಿಕರು ಅಲ್ಲಿಂದ ಓಡಿದ್ದರು. ರೈಲಿನಲ್ಲಿ ಯಾವುದೇ ರೀತಿಯ ತಾಂತ್ರಿಕ ದೋಷ ಇರಲಿಲ್ಲ. 20 ನಿಮಿಷದಲ್ಲಿ ಹಳಿ ದುರಸ್ತಿಕಾರ್ಯ ಪೂರ್ಣಗೊಳಿಸಿದ್ದರೆ ದುರಂತ ತಪ್ಪಿಸಬಹುದಿತ್ತು ಎಂದು ರೈಲ್ವೆ ಅಧಿಕಾರಿಗಳು  ಹೇಳಿದ್ದಾರೆ.

ಇನ್ನು ಈ ಮಾರ್ಗದಲ್ಲಿ ದುರಸ್ತಿಕಾರ್ಯ ನಡೆಯುತ್ತಿದೆ ಎನ್ನುವ ಮಾಹಿತಿ ಖಟೌಲಿ ಸ್ಟೇಷನ್ ನ ಸಿಬ್ಬಂದಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ಒಂದು ವೇಳೆ ಅಪಾಯದ ಸೂಚನೆ ಸಿಕ್ಕಿದ್ದರೆ ಖಟೌಲಿ ಸ್ಟೇಷನ್ ಗೆ ಉತ್ಕಲ್ ಎಕ್ಸ್ ಪ್ರೆಸ್  ತಲುಪುತ್ತಿರಲಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶಂಕೆ ಮೂಡಿಸಿದ ದುರಸ್ತಿ ಕಾರ್ಯ
ಇನ್ನು ಮೀರತ್ ಹಾಗೂ ಮುಜಾಫರ್ ನಗರದ ನಡುವಿನ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದರೂ, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರಲಿಲ್ಲವೇ.. ಅಥವಾ ಮಾಹಿತಿ ಇದ್ದರೂ ನಿರ್ಲಕ್ಷ್ಯವಹಿಸಿದ್ದರೆ ಅಥವಾ ಸಿಬ್ಬಂದಿಗಳೇ  ಅಧಿಕಾರಿಗಳಿಗೆ ಮಾಹಿತಿ ನೀಡದೇ ದುರಸ್ತಿ ಕಾರ್ಯ ನಡೆಸುತ್ತಿದ್ದರೇ ಎಂಬ ಹಲವು ಪ್ರಶ್ನೆಗಳು ಎದ್ದಿದ್ದು, ಈ ಬಗ್ಗೆ ಕೂಲಂಕುಷ ತನಿಖೆಯಿಂದ ಮಾತ್ರ ಉತ್ತರ ಸಿಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT