ಸಂಗ್ರಹ ಚಿತ್ರ 
ದೇಶ

ಎಐಎಡಿಎಂಕೆ ವಿಲೀನಕ್ಕೆ ವೇದಿಕೆ ಸಿದ್ಧ; ಚೆನ್ನೈನತ್ತ ರಾಜ್ಯಪಾಲ ವಿದ್ಯಾಸಾಗರ ರಾವ್!

ಮಾಜಿ ಸಿಎಂ ಜೆ ಜಯಲಲಿತಾ ಅವರ ನಿಧನದ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಂಕೆ ಪಕ್ಷ ಮತ್ತೆ ಒಂದಾಗುವ ಕಾಲ ಬಂದಿದ್ದು, ಪನ್ನೀರ್ ಸೆಲ್ವಂ ಬಣ ಹಾಗೂ ಪಳನಿಸ್ವಾಮಿ ಬಣಗಳ ವಿಲೀನಕ್ಕೆ ವೇದಿಕೆ ಸಿದ್ಧವಾಗಿದೆ.

ಚೆನ್ನೈ: ಮಾಜಿ ಸಿಎಂ ಜೆ ಜಯಲಲಿತಾ ಅವರ ನಿಧನದ ಬಳಿಕ ಇಬ್ಭಾಗವಾಗಿದ್ದ ಎಐಎಡಿಎಂಕೆ ಪಕ್ಷ ಮತ್ತೆ ಒಂದಾಗುವ ಕಾಲ ಬಂದಿದ್ದು, ಪನ್ನೀರ್ ಸೆಲ್ವಂ ಬಣ ಹಾಗೂ ಪಳನಿಸ್ವಾಮಿ ಬಣಗಳ ವಿಲೀನಕ್ಕೆ ವೇದಿಕೆ ಸಿದ್ಧವಾಗಿದೆ.

ಮೂಲಗಳ ಪ್ರಕಾರ ಇಂದೇ ಉಭಯ ಬಣಗಳು ವಿಲೀನವಾಗಲಿದೆ ಎಂದು ಹೇಳಲಾಗುತ್ತಿದ್ದು, ಶೀಘ್ರದಲ್ಲೇ ಸಿಎಂ ಇ ಪಳನಿ ಸ್ವಾಮಿ ಅವರು ತಮ್ಮ ಸಂಪುಟ ಪುನಾರಚನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರವೇ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುವ ಕುರಿತು ಮಾಹಿತಿ ಹಬ್ಬಿತ್ತಾದರೂ, ವಿಲೀನದ ಬಳಿಕ ಪನ್ನೀರ್ ಸೆಲ್ವಂ ಅವರಿಗೆ ನೀಡಬೇಕಾದ ಸ್ಥಾನ ಹಾಗೂ ಅವರ ಬೇಡಿಕೆ ಇಡೇರಿಕೆ ಕುರಿತು ಸಾಕಷ್ಟು ಅನುಮಾನಗಳ ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮತ್ತೆರಡು ದಿನಗಳ ಮುಂದೂಡಲಾಗಿತ್ತು. ಇನ್ನು ಈ ಹಿಂದೆ ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿದ್ದ ಪನ್ನೀರ್ ಸೆಲ್ವಂ ಅವರು ತಮ್ಮ ಪಟ್ಟನ್ನು ಸಡಿಲಿಸಿದ್ದು,ಇದೀಗ ಉಪ ಮುಖ್ಯಮಂತ್ರಿ ಹುದ್ದೆಗೆ ತಾವು ಸಿದ್ಧ ಎಂದು ಹೇಳಿದ್ದಾರೆ.

ಆದರೆ ಸಂಪುಟದಲ್ಲಿ ತಮ್ಮ ಬಣದ ಶಾಸಕರಿಗೆ ಪ್ರಮುಖ ಖಾತೆ ನೀಡುವಂತೆ ಪನ್ನೀರ್ ಸೆಲ್ವಂ ಆಗ್ರಹಿಸಿದ್ದಾರೆ ಎಂದು ಹೇಲಾಗುತ್ತಿದೆ. ಇದಲ್ಲದೆ ಈ ಹಿಂದೆ ಪನ್ನೀರ್ ಸೆಲ್ವಂ ಬಣ ಮುಂದಿಟ್ಟಿದ್ದ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆಯೂ ಸ್ಪಷ್ಟ ನಿಲುವು ತೆಗುದುಕೊಳ್ಳುವ ಸಾಧ್ಯತೆ ಇದೆ. ಪ್ರಮುಖವಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ಮತ್ತು ಅವರ ತಂಡವನ್ನು ಪಕ್ಷದಿಂದ ಶಾಶ್ವತವಾಗಿ ಹೊರಹಾಕುವುದು ಮತ್ತು ಶಶಿಕಲಾ ಬಣದ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಒಪಿಎಸ್ ಬಣ ಮುಂದಿಟ್ಟಿದೆ ಎಂದು ಹೇಳಲಾಗುತ್ತಿದೆ.

ಚೆನ್ನೈನತ್ತ ರಾಜ್ಯಪಾಲ ವಿದ್ಯಾಸಾಗರ ರಾವ್
ಇನ್ನು ತಮಿಳುನಾಡು ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಪಾಲರಾಗಿರುವ ವಿದ್ಯಾಸಾಗರ ರಾವ್ ಅವರು ಮಹಾರಾಷ್ಟ್ರದಲ್ಲಿ ತಮ್ಮೆಲ್ಲಾ ಕಾರ್ಯಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಚೆನ್ನೈನತ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ವಿದ್ಯಾಸಾಗರ್ ರಾವ್ ಅವರು ತಮ್ಮ ಎಲ್ಲ ಅಪಾಯಿಂಟ್ ಮೆಂಟ್ ಗಳನ್ನು ರದ್ದುಗೊಳಿಸಿ, ಚೆನ್ನೈನತ ದೌಡಾಯಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT