ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್ ಸಂಸದೆ ರಂಜಿತ್ ರಂಜನ್ ಬೆಂಗಾವಲು ವಾಹನ ಡಿಕ್ಕಿ: ಮೂವರು ಸಾವು

ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ಸಂಸದೆ ಮತ್ತು ಕಾಂಗ್ರೆಸ್ ವಕ್ತಾರೆ ರಂಜಿತ್ ರಂಜನ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ...

ಸುಪೌಲ್: ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ಸಂಸದೆ ಮತ್ತು ಕಾಂಗ್ರೆಸ್ ವಕ್ತಾರೆ ರಂಜಿತ್ ರಂಜನ್ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 
ಬಿಹಾರ ರಾಜ್ಯದ ಸುಪೌಲಿ ಜಿಲ್ಲೆ ನಿರ್ಮಾಲಿ-ಸಿಕರ್ಹಟಾ ಮುಖ್ಯರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. 
ಸಂಸದೆ ರಂಜಿತ್ ರಂಜನ್ ಅವರು ಬಿಹಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು. ಈ ವೇಳೆ ಸಂಸದೆಯೊಂದಿಗೆ ತೆರಳುತ್ತಿದ್ದ ಕಾರೊಂದು ಜನರಿಗೆ ಗುದ್ದಿದೆ. ಪರಿಣಾಮ  ಇಬ್ಬರು ಮಕ್ಕಳು ಸೇರಿದೆ ಮೂವರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 
ಅಪಘಾತ ಸಂದರ್ಭದಲ್ಲಿ ನಿರ್ಮಾಲಿ ವಿಭಾಗದ ಮುಖ್ಯಸ್ಥ ರಾಮ್ ಪ್ರಸೇಶ್ ಯಾದವ್ ಅವರೂ ಕೂಡ ಘಟನಾ ಸ್ಥಳದಲ್ಲಿದ್ದರು. ರಾಮ್ ಪ್ರಸೇಶ್ ಅವರು ಸೇರಿ ಮತ್ತಿಬ್ಬರಿಗೂ ಕೂಡ ಗಾಯಗಳಾಗಿರುವುದಾಗಿ ವರದಿಗಳು ತಿಳಿಸಿವೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ನಿರ್ಮಾಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ರಂಜಿತ್ ರಂಜನ್ ಅವರು, ನನ್ನ ಬೆಂಗಾವಲು ವಾಹನ ಯಾರಿಗೂ ಡಿಕ್ಕಿ ಹೊಡೆದಿಲ್ಲ. ಮಾಧ್ಯಮಗಳು ಹೇಳುತ್ತಿರುವಂತೆ ಯಾವುದೇ ಆಪಘಾತ ಸಂಭವಿಸಿಲ್ಲ, ಯಾರೂ ಸಾವನ್ನಪ್ಪಿಲ್ಲ. ನನ್ನ ಬೆಂಗಾವಲು ಪಡೆ ಡಿಕ್ಕಿ ಹೊಡೆದಿದೆ ಎಂಬ ಮಾಧ್ಯಮಗಳ ವರದಿ ಸುಳ್ಳು. ಅಪಘಾತ ನಡೆದಿರುವ ಸ್ಥಳದಿಂದ 12 ಕಿ.ಮೀ ದೂರದಲ್ಲಿ ನಾನಿದ್ದೆ. ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT