ಸಾಲ ಮರುಪಾವತಿ ಮಾಡಬೇಕಿದ್ದ ದಂಪತಿಗಳು ಆತ್ಮಹತ್ಯೆ: ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ದೂರು 
ದೇಶ

ಸಾಲ ಮರುಪಾವತಿ ಮಾಡಬೇಕಿದ್ದ ದಂಪತಿಗಳು ಆತ್ಮಹತ್ಯೆ: ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧ ದೂರು

ಸಾಲ ಮರುಪಾವತಿ ಮಾಡಬೇಕಿದ್ದ ಲಾಲ್ ಬಾಗ್ ನ ದೊಡ್ಡಮಾವಳ್ಳಿಯ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧವೂ ಆರೋಪ ಕೇಳಿಬಂದಿದ್ದು, ಈಗಾಗಲೇ

ಬೆಂಗಳೂರು: ಸಾಲ ಮರುಪಾವತಿ ಮಾಡಬೇಕಿದ್ದ ಲಾಲ್ ಬಾಗ್ ನ ದೊಡ್ಡಮಾವಳ್ಳಿಯ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಬಿಬಿಎಂಪಿ ಕಾರ್ಪೊರೇಟರ್ ವಿರುದ್ಧವೂ ಆರೋಪ ಕೇಳಿಬಂದಿದ್ದು, ಈಗಾಗಲೇ ಆರೋಪಿಗಳಾಗಿರುವ 5 ಮಂದಿಯೊಂದಿಗೆ ಕಾರ್ಪೊರೇಟರ್ ಸಹ ದಂಪತಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. 
ಕಲಾಸಿ ಪಾಳ್ಯದಲ್ಲಿ ಹೋಟೆಲ್ ನಡೆಸುತ್ತಿದ್ದ ನಂಜುಂಡ ಸ್ವಾಮಿ (47) ಹಾಗೂ ಪುಷ್ಪಲತ (41) ಗೆ ಕಾರ್ಪೊರೇಟರ್ ಅತಿ ಹೆಚ್ಚು ಬಡ್ಡಿ ನೀಡುವಂತೆ ಒತ್ತಡ ಹೇರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ನಂಜುಂಡ ಸ್ವಾಮಿ ಹಾಗೂ ಪುಷ್ಪಲತಾ ಮೊದಲ ಮಹಡಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಮಕ್ಕಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
ಆತ್ಮಹತ್ಯೆಗೂ ಮುನ್ನ ಬರೆದಿರುವ ಪತ್ರದಲ್ಲಿ ನಂಜುಂಡ ಸ್ವಾಮಿ ಹೆಮ್ಮಿಗೆಪುರದ ಕಾಂಗ್ರೆಸ್ ಕಾರ್ಪೊರೇಟರ್ ಆರ್ಯ ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಪೊಲೀಸರು ನೀಡಿರುವ ಮಾಹಿತಿ ಮೂಲಕ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT