ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್ 
ದೇಶ

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್, 74 ಮಂದಿಗೆ ಗಾಯ

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ...

ಔರೈಯಾ: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ. 

ಕೆಲ ದಿನಗಳ ಹಿಂದಷ್ಟೇ ಹಳಿ ನಿರ್ವಹಣೆ ವೈಫಲ್ಯದಿಂದಾಗಿ ಮುಜಾಫರ್ ನಗರದಲ್ಲಿ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿತ್ತು. ದುರ್ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿದ್ದವು. ಈ ಘಟನೆ ನಡೆದು ಇನ್ನೂ ವಾರಗಳೂ ಕೂಡ ಕಳೆದಿಲ್ಲ. ಅಷ್ಟರಲ್ಲಾಗಲೇ ಮತ್ತೊಂದು ದುರಂತ ಸಂಭವಿಸಿದೆ. 

ಅಝಮ್ಘಡ್ ದಿಂದ ನವದೆಹಲಿಗೆ ತೆರಳುತ್ತಿದ್ದ ವೇಳೆ ಬೆಳಗಿನ ಜಾವ 2.50ರ ಸುಮಾರಿಗೆ ಘಟನೆ ಸಂಭವಿಸಿದೆ. ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ರೈಜಿನ ಇಂಜಿನ್ ಡಂಪರ್ ಗೆ ಡಿಕ್ಕಿಯಾಗಿದೆ. ಪರಿಣಾಮ 74 ಮಂದಿ ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ರೈಲ್ವೇ ಅಧಿಕಾರಿಗಳು ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಸ್ತುತ ರಕ್ಷಣೆಗೊಳಪಟ್ಟಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ದುರ್ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು, ಪರಿಸ್ಥಿತಿಯನ್ನು ಖುದ್ದಾಗಿ ನಾನೇ ನಿಭಾಯಿಸುತ್ತಿದ್ದೇನೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT