ನವದೆಹಲಿ: ದೇಶದಲ್ಲಿ ಶಾಮ್ಬಾಈಶೀಡಾ ಸರಣಿ ರೈಲು ದುರಂತದ ಹಿನ್ನೆಲೆಯಲ್ಲಿ ರೈಲ್ವೆ ಮಂಡಳಿಯ ಅಧ್ಯಕ್ಷ ಅಶೋಕ್ ಮಿತ್ತಲ್ ರಾಜಿನಾಮೆ ನೀಡಿದ್ದಾರೆ.
ಅಶೋಕ್ ಮಿತ್ತಲ್, ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಆಗಸ್ಟ್ 19 ರಂದು ಹರಿದ್ವಾರಕ್ಕೆ ತೆರಳುತ್ತಿದ್ದ ಕಳಿಂಗ ಉತ್ಕಲ್ ಎಕ್ಸ್ಪ್ರೆಸ್ ರೈಲಿನ 14 ಬೋಗಿಗಳು ಉತ್ತರಪ್ರದೇಶದ ಮುಜಫ್ಫರ್ನಗರ ಬಳಿಯ ಖತೌಲಿ ಎಂಬಲ್ಲಿ ಹಳಿತಪ್ಪಿ 23 ಪ್ರಯಾಣಿಕರು ಮೃತಪಟ್ಟಿದ್ದರು. ಇಂದು ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ಕೈಫಿಯತ್ ಎಕ್ಸ್ಪ್ರೆಸ್ ರೈಲಿನ ಒಂಬತ್ತು ಬೋಗಿಗಳು ಹಳಿ ತಪ್ಪಿ 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.