ದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಶಶಿಕಲಾ ಮರುಪರಿಶೀಲನೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

Srinivas Rao BV
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನೀಡಲಾಗಿರುವ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 
ಪ್ರಕರಣದ ತೀರ್ಪಿನಲ್ಲಿ ಯಾವುದೇ ಲೋಪಗಳು ಕಂಡುಬಂದಿಲ್ಲ, ಆದ್ದರಿಂದ ಅರ್ಜಿಯನ್ನು ತಿರಸ್ಕರಿಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ತಮ್ಮನ್ನು ದೋಷಮುಕ್ತಗೊಳಿಸಬೇಕೆಂದು ವಿಎನ್ ಸುಧಾಕರನ್, ಇಳವರಸಿ, ಶಶಿಕಲಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 
SCROLL FOR NEXT