ಸಂಗ್ರಹ ಚಿತ್ರ 
ದೇಶ

'ಲಡಾಖ್ ಗಡಿಯಲ್ಲಿ ರಸ್ತೆ ನಿರ್ಮಿಸುವ ದುಸ್ಸಾಹಸ ಮಾಡದಿರಿ': ಭಾರತಕ್ಕೆ ಚೀನಾ ಎಚ್ಚರಿಕೆ

ಇತ್ತೀಚೆಗೆ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಕೈಕೈ ಮಿಲಾಯಿಸಿದ್ದ ಬೆನ್ನಲ್ಲೇ, ಲಡಾಖ್ ನ ಪಾಂಗೊಂಗ್ ಸರೋವರದ ಸಮೀಪ ಭಾರತ 20 ಕಿ.ಮೀ ಉದ್ದದ ರಸ್ತೆ ನಿರ್ಮಿಸುತ್ತಿರುವುದಕ್ಕೆ ಚೀನಾ ಆಕ್ಷೇಪ...

ಬೀಜಿಂಗ್: ಇತ್ತೀಚೆಗೆ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಕೈಕೈ ಮಿಲಾಯಿಸಿದ್ದ ಬೆನ್ನಲ್ಲೇ, ಲಡಾಖ್ ನ ಪಾಂಗೊಂಗ್ ಸರೋವರದ ಸಮೀಪ ಭಾರತ 20 ಕಿ.ಮೀ ಉದ್ದದ ರಸ್ತೆ ನಿರ್ಮಿಸುತ್ತಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. 

ಲಡಾಖ್ ಗಡಿಯಲ್ಲಿ ಭಾರತ ರಸ್ತೆ ನಿರ್ಮಾಣ ಮಾಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ವಕ್ತಾರ ಹುವಾ ಚುನೈಯಿಂಗ್ ಅವರು, ಚೀನಾದ ಅಭಿವೃದ್ಧಿ ಕಾರ್ಯಕ್ಕೆ ಭಾರತ ಅಡ್ಡಿಪಡಿಸುತ್ತಿದೆ. ಆದರೆ, ಭಾರತದ ಗಡಿಯ ಸಮೀಪ ರಸ್ತೆ ನಿರ್ಮಾಣ ಮಾಡುತ್ತಿದೆ. ಇದರಿಂದ ಭಾರತದ ಮಾತು ಕೃತಿ ಬೇರೆ ಬೇರೆ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ. 

ಬಹಿರಂಗವಾಗಿ ಶಾಂತಿ ಬಯಸುತ್ತೇವೆಂದು ಹೇಳುತ್ತಿರುವ ಭಾರತ, ಮತ್ತೊಂದೆಡೆ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ. ಭಾರತಕ್ಕೆ ಶಾಂತಿ ಬೇಕಿದ್ದರೆ ಗಡಿಯಲ್ಲಿ ರಸ್ತೆ ನಿರ್ಮಾಣ ಕಾರ್ಯ ಕೈಬಿಡುವುಡು ಒಳ್ಳೆಯದು. ಒಂದು ವೇಳೆ ಲಡಾಖ್ ಗಡಿಯಲ್ಲಿ ಭಾರತ ತನ್ನ ಕಾರ್ಯವನ್ನು ಮುಂದುವರೆಸಿದ್ದೇ ಆದರೆ, ಇದು ಡೋಕ್ಲಾಮ್ ಬಿಕ್ಕಟ್ಟನ್ನು ಮತ್ತಷ್ಟು ಬಿಗಡಾಯಿಸುತ್ತದೆ. ಲಡಾಖ್ ಬಳಿ ರಸ್ತೆ ನಿರ್ಮಾಣ ಮಾಡುವ ಮೂಲಕ ಭಾರತ ತನ್ನ ಕಪಾಳಕ್ಕೆ ತಾನೇ ಹೊಡೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. 

ಇದೇ ವೇಲೆ ಡೋಕ್ಲಾಮ್ ವಿವಾದ ಸಂಬಂಧ ಮಾತನಾಡಿರುವ ಅವರು, ಗಡಿಯಲ್ಲಿ ಶಾಂತಿ ಕಾಪಾಡುವ ಕುರಿತಂತೆ ಉಭಯ ರಾಷ್ಟ್ರಗಳು ಒಪ್ಪಂಂದ ಮಾಡಿಕೊಂಡಿತ್ತು. ಭಾರತ ಕೂಡಲೇ ಗಡಿಯಿಂದ ಬೇಷರತ್ತಾಗಿ ತನ್ನ ಸೇನೆಯನ್ನು ಹಿಂಪಡೆದುಕೊಳ್ಳಬೇಕೆಂದು ಹೇಳಿದ್ದಾರೆ. 

ಕಳೆದ ಮೂರು ತಿಂಗಳಿನಿಂದ ಭಾರತ–ಚೀನಾ ಗಡಿಯ ಸಿಕ್ಕಿಂ ವಲಯದಲ್ಲಿ ಸಂಘರ್ಷ ನಡೆಯುತ್ತಿದ್ದು, ಗಡಿ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಚೀನೀ ಸೈನಿಕರು ಅಲ್ಲಿ ಇದ್ದ ಭಾರತೀಯ ಬಂಕರ್ ಗಳನ್ನು ನಾಶ ಮಾಡಿದ್ದರು.  ಇದೇ ಕಾರಣಕ್ಕೆ ಗಡಿ ಗಸ್ತು ನಡೆಸುವ ಯೋಧರಿಗೆ ಬೆಂಬಲವಾಗಿ ಇನ್ನಷ್ಟು ಸೈನಿಕರನ್ನು ಕಳುಹಿಸಲಾಗಿತ್ತು. ಯುದ್ಧ ಮಾಡುವ ಉದ್ದೇಶಕ್ಕೆ ಅಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು. ಜೂನ್‌ 16 ಘಟನೆ ಬಳಿಕ ಇಂಡೋ-ಚೀನಾ ಗಡಿ ಪ್ರಕ್ಷುಬ್ದಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT