ಪ್ರವಾಹ ಪೀಡಿತ ಬಿಹಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ನಿತೀಶ್ ಜೊತೆಗೆ ಪ್ರವಾಹ ಪರಿಸ್ಥಿತಿ ಸಮೀಕ್ಷೆ 
ದೇಶ

ಪ್ರವಾಹ ಪೀಡಿತ ಬಿಹಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ನಿತೀಶ್ ಜೊತೆಗೆ ಪ್ರವಾಹ ಪರಿಸ್ಥಿತಿ ಸಮೀಕ್ಷೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಹಾರ ರಾಜ್ಯದ ಪ್ರವಾಹ ಪೀಡಿದ ಪ್ರದೇಶಗಳ ಸಮೀಕ್ಷೆ ಹಾಗೂ ಪರಿಹಾರ ಕಾರ್ಯಗಳ ಪರಾಮರ್ಶೆಗಾಗಿ ಶನಿವಾರ ಬಿಹಾರಕ್ಕೆ ಭೇಟಿ ನೀಡಿದ್ದಾರೆ...

ಪೂರ್ನಿಯಾ (ಬಿಹಾರ): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಹಾರ ರಾಜ್ಯದ ಪ್ರವಾಹ ಪೀಡಿದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಹಾಗೂ ಪರಿಹಾರ ಕಾರ್ಯಗಳ ಪರಾಮರ್ಶೆಗಾಗಿ ಶನಿವಾರ ಬಿಹಾರಕ್ಕೆ ಭೇಟಿ ನೀಡಿದ್ದಾರೆ. 
ಕಳೆದ ಹಲವು ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಳೆ ಸಂಬಂಧಿತ ದುರಂಗಳಲ್ಲಿ ಈ ವರೆಗೂ 415 ಜನರು ಮೃತಪಟ್ಟಿದ್ದಾರೆ. ಅಪಾರ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿಯವರು ಬಿಹಾರಕ್ಕೆ ಭೇಟಿ ನೀಡಿದ್ದಾರೆ.

ಬಿಹಾರ ರಾಜ್ಯದ ಅರಾರಿಯಾ, ಪೂರ್ನಿಯಾ, ಕಟಿಹಾರ್ ಮತ್ತು ಕಿಷನ್ ಗಂಜ್ ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. 

ವೈಮಾನಿಕ ಸಮೀಕ್ಷೆ ಬಳಿಕ ಪುರ್ನಿಯಾದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅಧಿಕಾರಿಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. 

ಪ್ರವಾಹದಿಂದಾಗಿ ಬಿಹಾರ ರಾಜ್ಯದ 21 ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದು, ಮುಜಾಫರ್ನಗರ, ಸಮಸ್ತಿಪುರ ಮತ್ತು ದರ್ಬಾಂಗ್ ಜಿಲ್ಲೆಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಲುಪಿದೆ. ಮುಜಾಫರ್ನಗರದ ಪ್ರದೇಶಗಳು, ತಿರ್ಹತ್ ಕಾಲುವೆ ಪ್ರವಾಹದಲ್ಲಿ ಸಿಲುಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

Suburban rail: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

ಮಧ್ಯಾಹ್ನ ಬಿಸಿಯೂಟ: ಮಕ್ಕಳಿಗೆ ಮೊಟ್ಟೆ ನೀಡಲು ಸ್ವಂತ ಹಣ ಖರ್ಚು ಮಾಡುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರು!

SCROLL FOR NEXT