ಟಿಟಿವಿ ದಿನಕರನ್ 
ದೇಶ

ಎಐಎಡಿಎಂಕೆ ಬಿಕ್ಕಟ್ಟು: ಪಕ್ಷದ ಪ್ರಮುಖ ಹುದ್ದೆಯಿಂದ ಮುಖ್ಯ ಸಚೇತಕ ರಾಜೇಂದ್ರನ್ ವಜಾಗೊಳಿಸಿದ ದಿನಕರನ್

ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸರ್ಕಾರಿ ಮುಖ್ಯ ಸಚೇತಕ ಎಸ್ ರಾಜೇಂದ್ರನ್ ಅವರನ್ನು ಪಕ್ಷದ ಪ್ರಮುಖ...

ಚೆನ್ನೈ: ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಸರ್ಕಾರಿ ಮುಖ್ಯ ಸಚೇತಕ ಎಸ್ ರಾಜೇಂದ್ರನ್ ಅವರನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಶನಿವಾರ ವಜಾಗೊಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ದಿನಕರನ್ ಬೆಂಬಲಕ್ಕೆ ನಿಂತಿದ್ದ 19 ಎಐಎಡಿಎಂಕೆ ಶಾಸಕರನ್ನು ಅನರ್ಹಗೊಳಿಸುವಂತೆ ಪತ್ರ ಬರೆದಿದ್ದ ರಾಜೇಂದ್ರನ್ ಅವರನ್ನು ಇಂದು ಅರಿಯಲೂರ್ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ. 
ರಾಜೇಂದ್ರನ್ ಅವರನ್ನು ಎಐಎಡಿಎಂಕೆ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿರುವ ದಿನಕರನ್ ಅವರು, ಅವರ ಸ್ಥಾನಕ್ಕೆ ಪಿ ಮುತ್ತಿಯನ್ ಅವರನ್ನು ನೇಮಕ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ವಿರುದ್ಧ ತಿರುಗಿಬಿದ್ದು ದಿನಕರನ್ ಬೆಂಬಲಕ್ಕೆ ನಿಂತಿದ್ದ 19 ಶಾಸಕರನ್ನು ಅನರ್ಹಗೊಳಿಸುವಂತೆ ರಾಜೇಂದ್ರನ್ ಅವರು ಕಳೆದ ಗುರುವಾರ ಸ್ಪೀಕರ್ ಪಿ ಧನಪಾಲ್ ಅವರಿಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT