ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಗಣೇಶ ಚತುರ್ಥಿ ಹಿನ್ನಲೆ ನೀಡಲಾಗಿದ್ದ ಪ್ರಸಾದ ತಿಂದು 70 ಜನ ಅಸ್ವಸ್ತ

ಗಣೇಶ ಚತುರ್ಥಿ ಹಬ್ಬದ ದಿನದಂದೂ ಒಡಿಶಾದ ಬಲಸೊರ್ ಜಿಲ್ಲೆಯಲ್ಲಿ ನೀಡಲಾಗಿದ್ದ ಪ್ರಸಾದವನ್ನು ತಿಂದು 70ಕ್ಕೂ ಹೆಚ್ಚು ಮಂದಿ ಅಸ್ವಸ್ತಗೊಂಡಿರುವ ಘಟನೆ ಭಾನುವಾರ ನಡೆದಿದೆ...

ಬಲಸೊರ್; ಗಣೇಶ ಚತುರ್ಥಿ ಹಬ್ಬದ ದಿನದಂದೂ ಒಡಿಶಾದ ಬಲಸೊರ್ ಜಿಲ್ಲೆಯಲ್ಲಿ ನೀಡಲಾಗಿದ್ದ ಪ್ರಸಾದವನ್ನು ತಿಂದು 70ಕ್ಕೂ ಹೆಚ್ಚು ಮಂದಿ ಅಸ್ವಸ್ತಗೊಂಡಿರುವ ಘಟನೆ ಭಾನುವಾರ ನಡೆದಿದೆ. 
ಗಣೇಶ ಚತುರ್ಥಿ ಪ್ರಯುಕ್ತ ನುಗಾಯಾನ್ ನಲ್ಲಿರುವ ಶಾಲಾ ಆವರಣದಲ್ಲಿ ಪ್ರಸಾದವನ್ನು ನೀಡಲಾಗಿತ್ತು. ಪ್ರಸಾದ ತಿಂದ ಕೆಲವೇ ನಿಮಿಷಗಳಲ್ಲಿ ಜನರು ಹೊಟ್ಟೆನೋವು ಕಾಣಿಸಿಕೊಂಡಿದೆ. ಕೆಲವರು ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ, ಅಸ್ವಸ್ತಗೊಂಡ 70 ಮಂದಿಯಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. 
ಅಸ್ವಸ್ತಗೊಂಡ ಜನರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು ಎಂದು ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಲಸೋರ್ ಜಿಲ್ಲೆಯ ಮುಖ್ಯ ವೈದ್ಯಕೀಯ ಅಧಿಕಾರಿ ವಿವೇಕಾನಂದ ದಾಸ್ ಅವರು, ಪ್ರಸಾದದಲ್ಲಿ ವಿಷಯುಕ್ತ ಅಂಶ ಇದ್ದಿದ್ದರಿಂದ ಘಟನೆ ಸಂಭವಿಸಿದೆ. ಈಗಾಗಲೇ ವೈದ್ಯಕೀಯ ತಂಡವನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. 
ಘಟನೆ ಕುರಿತಂತೆ ಈಗಾಗಲೇ ತನಿಖೆ ಆದೇಶಿಸಲಾಗಿದ್ದು, ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವರದಿ ಬಂದ ಬಳಿಕ ಸೂಕ್ತ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT