ಸಂಗ್ರಹ ಚಿತ್ರ 
ದೇಶ

ಬ್ಲೂವೇಲ್ ಗೇಮ್ ಭೂತ: ಆತ್ಮಹತ್ಯೆಗೆಂದು ಜೈಪುರದಿಂದ ಮುಂಬೈಗೆ ಬಂದಿದ್ದ ಬಾಲಕನ ರಕ್ಷಣೆ

ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ...

ಜೈಪುರ: ಬ್ಲೂವೇಲ್ ಆನ್'ಲೈನ್ ಗೇಮ್ ಹುಚ್ಚಿನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಜೈಪುರದಿಂದ ಮನೆ ಬಿಟ್ಟು ಮುಂಬೈಗೆ ಬಂದಿದ್ದ 16 ವರ್ಷದ ಬಾಲಕನೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. 
10 ತರಗತಿ ಓದುತ್ತಿರುವ ಬಾಲಕನೊಬ್ಬ ಬ್ಲೂವೇಲ್ ಗೇಮ್ ಆಡುತ್ತಿದ್ದು, ಆಟದ ಕೊನೆಯ ಹಂತದಲ್ಲಿ ನೀಡಲಾಗಿದ್ದ ಟಾಸ್ಕ್ ನ್ನು ಪೂರ್ಣಗೊಳಿಸಲು ಆತ್ಮಹತ್ಯೆ ಮಾಡಿಕೊಳ್ಳಲು ರೈಲು ಹತ್ತಿ ಜೈಪುರದಿಂದ ಮುಂಬೈಗೆ ಬಂದಿದ್ದಾನೆ. 
ಬಾಲಕ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಆತನ ಬಳಿಯಿದ್ದ ಫೋನನ್ನು ಟ್ರ್ಯಾಕ್ ಮಾಡಿದ್ದಾರೆ. ಈ ವೇಳೆ ಬಾಲಕ ಮುಂಬೈನ ಚರ್ಚ್ ಗೇಟ್ ಬಳಿ ಇರುವುದು ಕಂಡು ಬಂದಿದೆ. ಕೂಜಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಶುಕ್ರವಾರ ರಾತ್ರಿ ಬಾಲಕನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 
ಬಾಲಕನನ್ನು ರಕ್ಷಣೆ ಮಾಡಿದ ಪೊಲೀಸರು ತಪಾಸಣೆ ನಡೆಸಿದಾಗ ಆತನ ಬಳಿ ಚಾಕು ಇರುವುದು ಪತ್ತೆಯಾಗಿದೆ. ಬಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಹಂತದಲ್ಲಿದ್ದ ಎಂದು ಕರ್ನಿ ವಿಹಾರ್ ಪೊಲೀಸ್ ಠಾಣೆಯ ಮಹಾವೀರ್ ಸಿಂಗ್ ಅವರು ತಿಳಿಸಿದ್ದಾರೆ. ಪ್ರಸ್ತುತ ಬಾಲಕನನ್ನು ಪೊಲೀಸರು ಪೋಷಕರ ವಶಕ್ಕೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT