ವಿ ಕೆ ಶಶಿಕಲಾ 
ದೇಶ

ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ ಸಾಧ್ಯತೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ.
ಇಂದು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆಯಿಂದ ಉಚ್ಚಾಟಿಸುವ ಸಂಬಂಧ ಪಕ್ಷದ ಜನರಲ್ ಕೌನ್ಸಿಲ್ ಸಭೆ ಕರೆಯಲು ನಿರ್ಧರಿಸಲಾಗಿದೆ. ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಭವಿಷ್ಯ ನಿರ್ಧಾರವಾಗಲಿದೆ.
ಶಶಿಕಲಾ ಅವರು ಜೈಲಿಗೆ ಹೋಗುವ ಮುನ್ನ ಮಾಡಿದ ಕೆಲವು ನೇಮಕಾತಿಗಳ ಮಾನ್ಯತೆ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಪಕ್ಷದ ಕೆಲವು ಶಾಸಕರು ಮತ್ತು ಸಂಸದರು ಸಭೆಗೆ ಗೈರು ಆಗಿದ್ದರು ಎಂದು ಎಐಎಡಿಎಂಕೆ ಮೂಲಗಳು ತಿಳಿಸಿವೆ.
ಜಯಲಲಿತಾ ನಿಧನದ ನಂತರ ಕಳೆದ ಡಿಸೆಂಬರ್ 29ರಂದು ನಡೆದ ಪಕ್ಷದ ಜನರಲ್ ಕೌನ್ಸಿಲ್ ಸಭೆಯಲ್ಲಿ ಶಶಿಕಲಾ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಈ ಮಧ್ಯೆ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ 21 ಬಂಡಾಯ ಶಾಸಕರು ಮುಖ್ಯಮಂತ್ರಿ ಪಳನಿಸ್ವಾಮಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT