ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ 
ದೇಶ

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟ ಆಹಾರ': ಪಾಕ್ ನಿಂದ ವಿಡಿಯೋ ದುರ್ಬಳಕೆ

ಭಾರತದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆಱೋಪಿಸಿ ಬಿಎಸ್ಎಫ್ ಯೋಧ ಮಾಡಿದ್ದ ವಿಡಿಯೋವನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳಲು ಯತ್ನ ನಡೆಸುತ್ತಿದೆ ಎಂಬ...

ನವದೆಹಲಿ: ಭಾರತದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಬಿಎಸ್ಎಫ್ ಯೋಧ ಮಾಡಿದ್ದ ವಿಡಿಯೋವನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳಲು ಯತ್ನ ನಡೆಸುತ್ತಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 
ಯೋಧರಿ ವಿತರಿಸಲಾಗುತ್ತಿರುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದು, ಇದರ ಸತ್ಯಾಸತ್ಯತೆಯನ್ನು ಯಾರು ಬೇಕಾದರೂ ಪರೀಕ್ಷಿಸಬಹುದು ಎಂದು ಬಿಎಸ್ಎಫ್ ಮುಖ್ಯಸ್ಥ ಕೆ.ಕೆ. ಶರ್ಮಾ ಅವರು ಸವಾಲು ಹಾಕಿದ್ದಾರೆ. 
ಇದೇ ವೇಲೆ ಸೇನೆಯಲ್ಲಿ ವಿತರಿಸಲಾದ ಆಹಾರವು ಕಳಪೆ ಗುಣಮಟ್ಟದ್ದಾಗಿದೆ ಎಂಬ ತೇಜ್ ಬಹದ್ದೂರ್ ಯಾದವ್ ಅವರ ವಿಡಿಯೋ ದುರುಪಯೋಗದ ಮೂಲಕ ಸೈನಿಕರ ಆತ್ಮಸ್ಥೈರ್ಯವನ್ನು ಕುಸಿಯುಂತೆ ಮಾಡಲು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಯತ್ನಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. 
ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾಡನಾಡಿಕುವ ಕೆ.ಕೆ. ಶರ್ಮಾ ಅವರು, 2012ರಲ್ಲಿ ಹೆಚ್ಚುವರಿ ಡಿಜಿಯಾಗಿ ಬಿಎಸ್ಎಫ್ ಗೆ ಸೇರಿದ್ದೇನೆ. ಯೋಧರಾಗಲೀ ಅಥವಾ ಅಧಿಕಾರಿಗಳೇ ಆಗಲೀ ಆಹಾರದ ಬಗ್ಗೆ ದೂರು ನೀಡಿಲ್ಲ. ಹಾಗಾಗಿ ಸೇನೆಯಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿದ್ದಾರೆಂಬ ತೇಜ್ ಬಹದ್ದೂರ್ ವಿಡಿಯೋ ಕುರಿತು ಸಿಟ್ಟು ಬಂದಿತ್ತು. ಆದರೆ, ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಕೆಲ ಸಮಸ್ಯೆಗಳಿವೆ ಎಂದು ತಿಳಿಸಿದ್ದಾರೆ. 
ಈ ಹಿಂದೆ ಬಿಎಸ್ ಎಫ್ ನ ಯೋಧ ತೇಜ್ ಬಹದ್ದೂರ್ ಯಾದವ್ ಅವರು, ಗಡಿಯಲ್ಲಿ ನಿಂತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದರು. ತಮಗೆ ನೀಡುತ್ತಿರುವ ಆಹಾರ ಕಳಪೆ ಮಟ್ಟದಾಗಿದೆ ಎಂದು  ಹೇಳಿಕೊಂಡಿದ್ದರು. ಇದಾದ ಬಳಿಕ ಕೆಲ ಸೈನಿಕರು ಸರಣಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಟ್ಟಿದ್ದರು. ಇದರಿಂದ ಸೇನೆ ಹಾಗೂ ಕೇಂದ್ರ ಸರ್ಕಾರ ಮುಜುಗರಕ್ಕೀಡಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT