ಶಿವಸೇನೆ (ಸಂಗ್ರಹ ಚಿತ್ರ) 
ದೇಶ

ಪುಲ್ವಾಮ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರ ದಾಳಿ: ಕೇಂದ್ರದ ವಿರುದ್ಧ ಹರಿಹಾಯ್ದ ಶಿವಸೇನೆ

ಪುಲ್ವಾಮ್ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ 8 ಯೋಧರು ಹುತಾತ್ಮರಾದ ಪ್ರಕರಣ ಸಂಬಂಧ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಶಿವಸೇನೆ ಸೋಮವಾರ ಹರಿಹಾಯ್ದಿದೆ...

ಮುಂಬೈ: ಪುಲ್ವಾಮ್ ಪೊಲೀಸ್ ಕ್ಯಾಂಪ್ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ 8 ಯೋಧರು ಹುತಾತ್ಮರಾದ ಪ್ರಕರಣ ಸಂಬಂಧ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ಶಿವಸೇನೆ ಸೋಮವಾರ ಹರಿಹಾಯ್ದಿದೆ. 
ಪುಲ್ವಾಮಾದಲ್ಲಿ ನಡೆದ ಎನ್ ಕೌಂಟರ್ ಕುರಿತಂತೆ ತನ್ನ ಮುಖಪುಟ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಯೋತ್ಪಾದನೆ ಕಡಿಮೆಯಾಗುತ್ತಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯ ಮೇಲೆ ಸಂಶಯ ಬರುತ್ತಿದೆ ಎಂದು ಹೇಳಿಕೊಂಡಿದೆ. 
ಪುಲ್ವಾಮ ಎನ್ ಕೌಂಟರ್ ಪ್ರಕರಣ ಕಾಶ್ಮೀರದ ಸುರಕ್ಷತೆ ಬಗ್ಗೆ ಕೇಂದ್ರ ನೀಡಿದ್ದ ಹೇಳಿಕೆಯನ್ನು ಪ್ರಶ್ನಾರ್ಹ ಸ್ಥಾನದಲ್ಲಿ ನಿಲ್ಲುವಂತೆ ಮಾಡಿದೆ ಎಂದು ಹೇಳಿದೆ. 
ಇದೇ ವೇಳೆ ಡೇರಾ ಸಚ್ಚಾ ಸೌದ ರಾಮ್ ರಹೀಂ ವಿರುದ್ಧ ನ್ಯಾಯಾಲಯ ತೀರ್ಪು ಪ್ರಕಟಿಸಿದ ಬಳಿಕ ಹರಿಯಾಣದಲ್ಲಿ ಸೃಷ್ಟಿಯಾದ ಹಿಂಸಾಚಾರವನ್ನು ಶಿವಸೇನೆ ತೀವ್ರವಾಗಿ ಖಂಡಿಸಿದೆ. 
ನಂಬಿಕೆಯ ಹೆಸರಿನಲ್ಲಿ ನಡೆಸಲಾಗುತ್ತಿರುವ ಹಿಂಸಾಚಾರ ಖಂಡನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹೇಳಿದ್ದರು. ಆದರೆ, ಮತ್ತೊಂದೆಡೆ ಹೈಕೋರ್ಟ್ ಸರ್ಕಾರದ ವಿರುದ್ಧವೇ ತೀವ್ರವಾಗಿ ಕಿಡಿಕಾರಿತ್ತು. ರಾಜಕೀಯ ಅಜೆಂಡಾಗಳಿಂದಾಗಿ ಹರಿಯಾಣ ಸರ್ಕಾರ ಪಂಚಕುಲ ಹೊತ್ತಿಯುವಂತೆ ಮಾಡಿದೆ. ಇದು ನಿಜಕ್ಕೂ ಆಘಾತಕಾರಿ ವಿಚಾರ ಎಂದು ಹೇಳಿತ್ತು. ಈ ರೀತಿಯ ಘಟನೆಗಳು ದೇಶದಾದ್ಯಂತ ನಡೆಯುತ್ತಿದೆ ಎಂದು ತಿಳಿಸಿದೆ. 
ಶತ್ರುಗಳನ್ನು ಹೊರಗೆ ಹಾಕಿ ದೇಶವನ್ನು ರಕ್ಷಣೆ ಮಾಡುತ್ತಿರುವುದು ಸೇನೆ. ಹಣ ಪಡೆಯುತ್ತಿರುವ ಜನರಲ್ಲ. ದೇಶವೇ ಇಲ್ಲ ಎಂದಾದ ಮೇಲೆ ಹಣದಿಂದ ಏನನ್ನು ಮಾಡುತ್ತೀರಿ? ನಮ್ಮ ಯೋಧರು ದೇಶಕ್ಕಾಗಿ ಹೋರಾಟ ಮಾಡುತ್ತಿರುವುದರಿಂದಲೇ ನಾವು ಕಾಶ್ಮೀರದ ಹಾಗೂ ಡೋಕ್ಲಾಮ್ ನಲ್ಲಿರುವ ಶತ್ರುಗಳ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿದೆ ಎಂದಿದೆ. 
ಪುಲ್ವಾಮ ಎನ್ ಕೌಂಟರ್ ನಲ್ಲಿ ಹುತಾತ್ಮರಾದ ರವೀಂದ್ರ ಧನವಾಡೆಯವರು ಮಹಾರಾಷ್ಟ್ರ ರಾಜ್ಯದ ಹೆಮ್ಮೆಯಾಗಿದ್ದಾರೆ. ಮರಾಠಿಗರು ಯಾವಾಗಲೂ ದೇಶಕ್ಕಾಗಿ ತಮ್ಮ ಜೀವವನ್ನು ತ್ಯಾಗ ಮಾಡುತ್ತಿರುತ್ತಾರೆ. ದೇಶಕ್ಕಾಗಿ ರಕ್ತ ನೀಡಲು ನಾವು ಸದಾಕಾಲ ಮುಂದೆ ಇರುತ್ತೇವೆ. ಮಹಾರಾಷ್ಟ್ರದೊಂದಿಗೆ ಮುಗ್ಧರಂತೆ ನಟಿಸುತ್ತಿರುವವರು ಮೊದಲು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಶಿವಸೇನೆ ಹೇಳಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT