ವಿಕಾಸ್ ಬರಾಲ - ವರ್ನಿಕಾ ಕುಂದು 
ದೇಶ

ಯುವತಿ ಹಿಂಬಾಲಿಸಿದ ಪ್ರಕರಣ: ವಿಕಾಸ್ ಬರಾಲ ಜಾಮೀನು ಅರ್ಜಿ ವಜಾ

ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹರಿಯಾಣ ಬಿಜೆಪಿ....

ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲ ಪುತ್ರ ವಿಕಾಸ್ ಬರಾಲ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ಜಿಲ್ಲಾ ಕೋರ್ಟ್ ವಜಾಗೊಳಿಸಿದೆ.
ಆಗಸ್ಟ್ 5ರಂದು ಯುವತಿ ಅಪಹರಣ ಯತ್ನ ಹಾಗೂ ಕಿರುಕಳ ನೀಡಿದ ಆರೋಪದ ಮೇಲೆ ವಿಕಾಸ್ ಬರಾಲ ಹಾಗೂ ಅವರ ಸ್ನೇಹಿತ ಅಶೋಕ್ ಕುಮಾರ್ ಅವರು ಪೊಲೀಸರು ಬಂಧಿಸಿದ್ದು, ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್ ವಜಾಗೊಳಿಸಿದೆ.
ಬಿಜೆಪಿ ನಾಯಕನ ಪುತ್ರ ಹಾಗೂ ಆತನ ಸ್ನೇಹಿತನ ವಿರುದ್ಧ ಐಪಿಸಿ ಸೆಕ್ಷೆನ್ 365 (ಅಪಹರಣ ಯತ್ನ) ಹಾಗೂ 511ರಡಿ ಜಾಮೀನು ರಹಿತ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೋಕ್ ಅವರು ನಿವೃತ್ತ ಐಎಎಸ್ ಅಧಿಕಾರಿಯ ಪುತ್ರಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT