ಚಂದ್ರಬಾಬು ನಾಯ್ಡು 
ದೇಶ

ಅವರು ಡೇರಾ ಬಾಬ ಆದರೆ ನಮ್ಮವರು ಜಗನ್ ಬಾಬ: ಜಗನ್ ರೆಡ್ಡಿ ಬಗ್ಗೆ ನಾಯ್ಡು ವ್ಯಂಗ್ಯ

ಆಂಧ್ರಪ್ರದೇಶದ ಉಪಚುನಾವಣೆ ಮುಗಿದಿದ್ದರೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದ್ದಾರೆ.

ಅಮರಾವತಿ: ಆಂಧ್ರಪ್ರದೇಶದ ಉಪಚುನಾವಣೆ ಮುಗಿದಿದ್ದರೂ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದ್ದಾರೆ. 
ಡೇರಾ ಸಚ್ಚಾದ ಮುಖ್ಯಸ್ಥನಿಗೆ ಜಗನ್ ಮೋಹನ್ ರೆಡ್ಡಿ ಅವರನ್ನು ಹೋಲಿಕೆ ಮಾಡಿರುವ ಚಂದ್ರಬಾಬು ನಾಯ್ಡು, ಅವರು ಡೇರಾ ಬಾಬ ಆದರೆ ನಮ್ಮಲ್ಲಿ ಜಗನ್ ಬಾಬ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಜಗನ್ ಬಾಬಾ ವಿನಾಶಕಾರಿ ಹಾಗೂ ಕ್ರಿಮಿನಲ್ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ನಾಯ್ಡು ಟೀಕಾಪ್ರಹಾರ ಮಾಡಿದ್ದಾರೆ. 
ಡೇರಾ ಸಚ್ಚಾದ ಬಾಬ ಒಳ್ಳೆಯ ಸಂಸ್ಥೆಯ ಮುಖ್ಯಸ್ಥರಾಗಿದ್ದರು. ಆದರೆ ತಮ್ಮ ಸಾಮರ್ಥ್ಯವನ್ನು ಕೆಟ್ಟದ್ದಕ್ಕೆ ಬಳಕೆ ಮಾಡಿಕೊಂಡು ಮಹಿಳೆಯರು ತಮ್ಮ ಬಗ್ಗೆ ಇದ್ದ ವಿಶ್ವಾಸವನ್ನು ಕಳೆದುಕೊಳ್ಳುವಂತೆ ಮಾಡಿಕೊಂಡರು. ಅಷ್ಟೇ ಅಲ್ಲದೇ, ಹಿಂಸಾಚಾರಕ್ಕೂ ಕಾರಣವಾದರು, ಅಂತೆಯೇ ನಮ್ಮವರೂ ಇದ್ದು, ಅವರನ್ನು ಜಗನ್ ಬಾಬ ಎಂದು ಕರೆಯುತ್ತೇನೆ ಎಂದು ಚಂದ್ರಬಾಬು ನಾಯ್ಡು ಜಗನ್ ಮೋಹನ್ ರೆಡ್ಡಿ ಬಗ್ಗೆ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT