ಟಿಟಿವಿ ದಿನಕರನ್ 
ದೇಶ

ನನ್ನ ಬಳಿ 'ಸ್ಲೀಪರ್ ಸೆಲ್' ಇವೆ, ರಾಜಿನಾಮೆ ನೀಡಿ: ತಮಿಳುನಾಡು ಸಿಎಂ ಪಳನಿಸ್ವಾಮಿಗೆ ದಿನಕರನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದ್ದು, ತಮ್ಮ ನಾಯಕತ್ವದ ವಿರುದ್ಧವೇ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದ್ದು, ತಮ್ಮ ನಾಯಕತ್ವದ ವಿರುದ್ಧವೇ ತಿರುಗಿಬಿದ್ದಿರುವ ಜೈಲು ಪಾಲಾಗಿರುವ ವಿ.ಕೆ.ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರು, ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ, ಇಲ್ಲದಿದ್ದರೆ ಪಕ್ಷದಲ್ಲಿರುವ ತಮ್ಮ ರಹಸ್ಯ ಬೆಂಬಲಿಗರ(ಸ್ಲೀಪರ್ ಸೆಲ್)ನ್ನು ಸೆಳೆಯುವುದಾಗಿ ಬುಧವಾರ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡು ಸಿಎಂಗೆ ನೇರವಾಗಿಯೇ ಎಚ್ಚರಿಕೆ ನೀಡಿರುವ ದಿನಕರನ್ ಅವರು, ನನಗೆ ಹಲವು ಎಐಎಡಿಎಂಕೆ ಶಾಸಕರ ಬೆಂಬಲ ಇದೆ. ಹೀಗಾಗಿ ಅವರು ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದು ಉತ್ತಮ ಎಂದಿದ್ದಾರೆ.
ಪಕ್ಷದಲ್ಲಿ ಹಲವು ಸ್ಲೀಪರ್ ಸೆಲ್ ಗಳಿದ್ದು, ಅವರು ಶೀಘ್ರದಲ್ಲೇ ತಮ್ಮ ಬಣ ಸೇರಿಕೊಳ್ಳಲಿದ್ದಾರೆ ಎಂದು ದಿನಕರನ್ ತಿಳಿಸಿದ್ದಾರೆ.
ಕಳೆದ ಸೋಮವಾರ ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೆ ಎಐಎಡಿಎಂಕೆ 21 ಶಾಸಕರು ಗೈರು ಆಗಿದ್ದು, ಆ ಶಾಸಕರೆಲ್ಲಾ ತಮ್ಮ ಬೆಂಬಲಿಗರು ಮತ್ತು ಪಳನಿಸ್ವಾಮಿ ಬದಲಾವಣೆಗೆ ಒತ್ತಾಯಿಸಿರುವುದಾಗಿ ದಿನಕರನ್ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT