ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದ್ದು, ತಮ್ಮ ನಾಯಕತ್ವದ ವಿರುದ್ಧವೇ ತಿರುಗಿಬಿದ್ದಿರುವ ಜೈಲು ಪಾಲಾಗಿರುವ ವಿ.ಕೆ.ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರು, ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿ, ಇಲ್ಲದಿದ್ದರೆ ಪಕ್ಷದಲ್ಲಿರುವ ತಮ್ಮ ರಹಸ್ಯ ಬೆಂಬಲಿಗರ(ಸ್ಲೀಪರ್ ಸೆಲ್)ನ್ನು ಸೆಳೆಯುವುದಾಗಿ ಬುಧವಾರ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡು ಸಿಎಂಗೆ ನೇರವಾಗಿಯೇ ಎಚ್ಚರಿಕೆ ನೀಡಿರುವ ದಿನಕರನ್ ಅವರು, ನನಗೆ ಹಲವು ಎಐಎಡಿಎಂಕೆ ಶಾಸಕರ ಬೆಂಬಲ ಇದೆ. ಹೀಗಾಗಿ ಅವರು ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದು ಉತ್ತಮ ಎಂದಿದ್ದಾರೆ.
ಪಕ್ಷದಲ್ಲಿ ಹಲವು ಸ್ಲೀಪರ್ ಸೆಲ್ ಗಳಿದ್ದು, ಅವರು ಶೀಘ್ರದಲ್ಲೇ ತಮ್ಮ ಬಣ ಸೇರಿಕೊಳ್ಳಲಿದ್ದಾರೆ ಎಂದು ದಿನಕರನ್ ತಿಳಿಸಿದ್ದಾರೆ.
ಕಳೆದ ಸೋಮವಾರ ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೆ ಎಐಎಡಿಎಂಕೆ 21 ಶಾಸಕರು ಗೈರು ಆಗಿದ್ದು, ಆ ಶಾಸಕರೆಲ್ಲಾ ತಮ್ಮ ಬೆಂಬಲಿಗರು ಮತ್ತು ಪಳನಿಸ್ವಾಮಿ ಬದಲಾವಣೆಗೆ ಒತ್ತಾಯಿಸಿರುವುದಾಗಿ ದಿನಕರನ್ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos