ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ 
ದೇಶ

'ಸಂತಾನಹರಣ' ಮಾಡಿ ಇಂದಿರಾ ಅಧಿಕಾರ ಹೋಯ್ತು; 'ನೋಟು ಬ್ಯಾನ್' ನಿಂದ ಬಿಜೆಪಿ ಕಳೆದುಕೊಳ್ಳಲಿದೆ: ಟಿಎಂಸಿ

ಮೋದಿ ಅವರ ನೋಟು ಅಮಾನ್ಯೀಕರಣ ಯೋಜನೆ ಇಂದಿರಾಗಾಂಧಿ ಅವರ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಸಮಾನ ಎಂದು ಹೋಲಿಕೆ ಮಾಡಿದ್ದಾರೆ....

ನವದೆಹಲಿ: ನೋಟು ಅಮಾನ್ಯೀಕರಣ ಎಂಬುದು ದೊಡ್ಡ ಪ್ಲಾಪ್ ಶೋ ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ ಬ್ರೇನ್ ಟೀಕಿಸಿದ್ದಾರೆ. 
ಮೋದಿ ಅವರ ನೋಟು ಅಮಾನ್ಯೀಕರಣ ಯೋಜನೆ ಇಂದಿರಾಗಾಂಧಿ  ಅವರ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಸಮಾನ ಎಂದು ಹೋಲಿಕೆ ಮಾಡಿದ್ದಾರೆ.
ಸಂತಾನಹರಣ ಯೋಜನೆಯಿಂದಾಗಿ  1977ರ ಚುನಾವಣೆಯಲ್ಲಿ ಇಂದಿರಾಗಾಂಧಿ ಅಧಿಕಾರ ಕಳೆದುಕೊಂಡರು ಅದೇ ರೀತಿ, ನೋಟು ನಿಷೇಧ ಮಾಡಿರುವ ಬಿಜೆಪಿ 2019ರ ಲೋಕಸಭೆ ಚುನಾವಣೆಯಲ್ಲಿ ತನ್ನ ಅಧಿಕಾರ ಕಳೆದು ಕೊಳ್ಳಿಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 
ನೋಟು ಅಮಾನ್ಯೀಕರಣ ಸಂಪೂರ್ಣವಾಗಿ  ವಿಫಲವಾಗಿದೆ. ನೋಟು ನಿಷೇಧಗೊಳಿಸಿದ ಮೊದಲ ದಿನದಿಂದಲೂ ಇಲ್ಲಿಯವರೆಗೂ ಟಿಎಂಸಿ ಮತ್ತು ಮಮತಾ ಬ್ಯಾನರ್ಜಿ ಇದೊಂದು ದೊಡ್ಡ ಪ್ಲಾಪ್ ಶೋ ಎಂದು ಹೇಳುತ್ತಲೇ ಬಂದಿದೆ. 21ನೇ ಶತಮಾನದ ಬಹು ದೊಡ್ಡ ಭ್ರಷ್ಟಾಚಾರ ಹಗರಣವಾಗಿದೆ ಎಂದು ಹೇಳಿದ್ದಾರೆ.
ಜನರನ್ನು ಮೂರ್ಖರನ್ನಾಗಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನೋಟು ಅಮಾನ್ಯೀಕರಣದಿಂದಾಗಿ ಜನರಿಗೆ ಹಾಗೂ ದೇಶಕ್ಕೆ ಹಾನಿ ಉಂಟಾಗಿದೆ. ಇದಕ್ಕಾಗಿ ಪಕ್ಷ ಮುಂದಿನ ಚುನಾವಣೆಯಲ್ಲಿ ಬೆಲೆ ತೆರಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!