ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ 
ದೇಶ

'ಸಂತಾನಹರಣ' ಮಾಡಿ ಇಂದಿರಾ ಅಧಿಕಾರ ಹೋಯ್ತು; 'ನೋಟು ಬ್ಯಾನ್' ನಿಂದ ಬಿಜೆಪಿ ಕಳೆದುಕೊಳ್ಳಲಿದೆ: ಟಿಎಂಸಿ

ಮೋದಿ ಅವರ ನೋಟು ಅಮಾನ್ಯೀಕರಣ ಯೋಜನೆ ಇಂದಿರಾಗಾಂಧಿ ಅವರ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಸಮಾನ ಎಂದು ಹೋಲಿಕೆ ಮಾಡಿದ್ದಾರೆ....

ನವದೆಹಲಿ: ನೋಟು ಅಮಾನ್ಯೀಕರಣ ಎಂಬುದು ದೊಡ್ಡ ಪ್ಲಾಪ್ ಶೋ ಎಂದು ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ ಬ್ರೇನ್ ಟೀಕಿಸಿದ್ದಾರೆ. 
ಮೋದಿ ಅವರ ನೋಟು ಅಮಾನ್ಯೀಕರಣ ಯೋಜನೆ ಇಂದಿರಾಗಾಂಧಿ  ಅವರ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಸಮಾನ ಎಂದು ಹೋಲಿಕೆ ಮಾಡಿದ್ದಾರೆ.
ಸಂತಾನಹರಣ ಯೋಜನೆಯಿಂದಾಗಿ  1977ರ ಚುನಾವಣೆಯಲ್ಲಿ ಇಂದಿರಾಗಾಂಧಿ ಅಧಿಕಾರ ಕಳೆದುಕೊಂಡರು ಅದೇ ರೀತಿ, ನೋಟು ನಿಷೇಧ ಮಾಡಿರುವ ಬಿಜೆಪಿ 2019ರ ಲೋಕಸಭೆ ಚುನಾವಣೆಯಲ್ಲಿ ತನ್ನ ಅಧಿಕಾರ ಕಳೆದು ಕೊಳ್ಳಿಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 
ನೋಟು ಅಮಾನ್ಯೀಕರಣ ಸಂಪೂರ್ಣವಾಗಿ  ವಿಫಲವಾಗಿದೆ. ನೋಟು ನಿಷೇಧಗೊಳಿಸಿದ ಮೊದಲ ದಿನದಿಂದಲೂ ಇಲ್ಲಿಯವರೆಗೂ ಟಿಎಂಸಿ ಮತ್ತು ಮಮತಾ ಬ್ಯಾನರ್ಜಿ ಇದೊಂದು ದೊಡ್ಡ ಪ್ಲಾಪ್ ಶೋ ಎಂದು ಹೇಳುತ್ತಲೇ ಬಂದಿದೆ. 21ನೇ ಶತಮಾನದ ಬಹು ದೊಡ್ಡ ಭ್ರಷ್ಟಾಚಾರ ಹಗರಣವಾಗಿದೆ ಎಂದು ಹೇಳಿದ್ದಾರೆ.
ಜನರನ್ನು ಮೂರ್ಖರನ್ನಾಗಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನೋಟು ಅಮಾನ್ಯೀಕರಣದಿಂದಾಗಿ ಜನರಿಗೆ ಹಾಗೂ ದೇಶಕ್ಕೆ ಹಾನಿ ಉಂಟಾಗಿದೆ. ಇದಕ್ಕಾಗಿ ಪಕ್ಷ ಮುಂದಿನ ಚುನಾವಣೆಯಲ್ಲಿ ಬೆಲೆ ತೆರಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT