ರಾಕಿ ಯಾದವ್ 
ದೇಶ

ಓವರ್​ಟೇಕ್ ಮಾಡಿದ್ದಕ್ಕೆ ಯುವಕನ ಹತ್ಯೆ: ಜೆಡಿಯು ನಾಯಕಿಯ ಪುತ್ರ ರಾಕಿ ಯಾದವ್ ಸೇರಿ ನಾಲ್ವರು ದೋಷಿ

ಕಾರು ಓವರ್​ಟೇಕ್ ಮಾಡಿದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಯುನಿಂದ ಅಮಾನತುಗೊಂಡ....

ಗಯಾ: ಕಾರು ಓವರ್​ಟೇಕ್ ಮಾಡಿದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಯುನಿಂದ ಅಮಾನತುಗೊಂಡ ಎಂಎಲ್ ಸಿ ಮನೋರಮಾ ದೇವಿ ಪುತ್ರ ರಾಕಿ ಯಾದವ್ ಹಾಗೂ ಇತರೆ ಮೂವರು ತಪ್ಪಿತಸ್ಥರು ಎಂದು ಗುರುವಾರ ಗಯಾ ಜಿಲ್ಲಾ ಕೋರ್ಟ್ ತೀರ್ಪು ನೀಡಿದೆ.
ಕಳೆದ ವರ್ಷ ಮೇ 7ರಂದು ಕಾರು ಓವರ್ ಟೇಕ್ ಮಾಡಿದ ಪಿಯುಸಿ ವಿದ್ಯಾರ್ಥಿ ಅದಿತ್ಯ ಸಚ್ ದೇವ್ ಅವರು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಇಂದು ತೀರ್ಪು ನೀಡಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 6ಕ್ಕೆ ಕಾಯ್ದಿರಿಸಿದೆ.
ವ್ಯಾಪಾರಿಯೊಬ್ಬರ ಪುತ್ರ ಆದಿತ್ಯ ಸಚ್​ದೇವ್ ಹಾಗೂ ಸ್ನೆಹಿತರನ್ನು ಒಳಗೊಂಡ ಸ್ವಿಪ್ಟ್ ಕಾರು ಶಾಸಕಿಯ ಪುತ್ರ ರಾಕಿಯ ಎಸ್​ಯುವಿ ಕಾರನ್ನು ಓವರ್ ಟೇಕ್ ಮಾಡಿದ ಹಿನ್ನೆಲೆಯಲ್ಲಿ ಉಭಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಆವೇಶಕ್ಕೆ ಒಳಗಾದ ರಾಕಿ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಆದಿತ್ಯಾಗೆ ಗುಂಡಿಟ್ಟು ಹತ್ಯೆ ಮಾಡಿದ್ದರು. ಈ ಸಂಬಂಧ ಮೇ 11, 2016ರಲ್ಲಿ ರಾಕಿ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ರಾಕಿ ಯಾದವ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಅಲ್ಲದೆ ವಿಧಿವಿಜ್ಞಾನ ವರದಿಯಲ್ಲಿ ರಾಕಿ ಯಾದವ್ ಗನ್​ನಿಂದ ಹಾರಿದ ಬುಲೆಟ್​ನಿಂದ ಆದಿತ್ಯ ಸಚ್​ದೇವ್ ಸಾವು ಸಂಭವಿಸಿದೆ ಎಂಬುದು ಬಹಿರಂಗಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT