ರಾಬರ್ಟ್ ವಾದ್ರಾ(ಸಂಗ್ರಹ ಚಿತ್ರ) 
ದೇಶ

ರಾಜಸ್ತಾನ: ರಾಬರ್ಟ್ ವಾದ್ರಾಗೆ ತಟ್ಟಿದ ಬಿಕನೇರ್ ಭೂ ಹಗರಣ ತನಿಖೆಯ ಬಿಸಿ

ಬಿಕನೇರ್ ನ ಅಕ್ರಮ ಭೂ ಹಗರಣ ಕೇಸಿಗೆ ಸಂಬಂಧಪಟ್ಟಂತೆ 18 ಕೇಸುಗಳನ್ನು ಸಿಬಿಐ ಮರು ದಾಖಲೆ...

ಜೈಪುರ:  ಬಿಕನೇರ್ ನ ಅಕ್ರಮ ಭೂ ಹಗರಣ ಕೇಸಿಗೆ ಸಂಬಂಧಪಟ್ಟಂತೆ 18 ಕೇಸುಗಳನ್ನು ಸಿಬಿಐ ಮರು ದಾಖಲೆ ಮಾಡಿಕೊಂಡಿದೆ. ಅವುಗಳಲ್ಲಿ ನಾಲ್ಕು ಕೇಸುಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧವಾಗಿವೆ.
ತನಿಖಾ ಸಂಸ್ಥೆ ದಾಖಲಿಸಿರುವ 18 ಎಫ್ಐಆರ್ ಗಳಲ್ಲಿ  16 ಕೇಸುಗಳು ಗಜ್ನೆರ್ ಪೊಲೀಸ್ ಠಾಣೆಯಲ್ಲಿ ಮತ್ತು ಎರಡು ಕೇಸುಗಳು ಬಿಕನೇರ್ ನ ಕೊಲಾಯತ್ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ಮತ್ತು ಸೆಪ್ಟೆಂಬರ್ ನಡುವೆ ದಾಖಲಾದ ಕೇಸುಗಳಾಗಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬಿಕನೇರ್ ಭೂ ಅಕ್ರಮ ಮತ್ತು ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಕಳೆದ ವಾರ ರಾಜಸ್ತಾನ ಸರ್ಕಾರ, ಸಿಬಿಐ ತನಿಖೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿತ್ತು. ರಾಜಸ್ತಾನದ ಬಿಕನೇರ್ ನಲ್ಲಿ 55 ಎಕರೆ ಭೂಮಿಯ ಮಾರಾಟ ಮತ್ತು ಖರೀದಿಯಲ್ಲಿ ಅಕ್ರಮವಾಗಿ ವಾದ್ರಾ ಅವರಿಗೆ ಸೇರಿದ ಕಂಪೆನಿ ಭಾಗಿಯಾಗಿದೆ ಎಂಬ ಆರೋಪವಿದೆ. 
ಮಹಾಜನ್ ಫೈರಿಂಗ್ ರೇಂಜ್ ಗೆ ಬದಲಾಗಿ ಪರಿಹಾರವಾಗಿ ಈ ಭೂಮಿಯನ್ನು ನೀಡಲಾಗಿತ್ತು. ಆದರೂ ಫಲಾನುಭವಿಗಳಿಗೆ ಭೂಮಿ ಸಿಕ್ಕಿರಲಿಲ್ಲ. ಬದಲಾಗಿ ಫಲಾನುಭವಿಗಳಲ್ಲದ ವ್ಯಕ್ತಿಗಳಿಗೆ ಭೂಮಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT