ಮಧ್ಯ ಪ್ರದೇಶದ ದೌದಾನ್ ಗ್ರಾಮದಲ್ಲಿರುವ ಗಂಗೌ ಅಣೆಕಟ್ಟಿನ ಒಂದು ನೋಟ 
ದೇಶ

ನೆರೆ, ಪ್ರವಾಹ ತಡೆಗೆ ನರೇಂದ್ರ ಮೋದಿಯವರ ಮಹಾತ್ವಾಕಾಂಕ್ಷಿ ನದಿ ಜೋಡಣೆ ಯೋಜನೆ

ದೇಶದ ಪ್ರಮುಖ ದೊಡ್ಡ ನದಿಗಳನ್ನು ಜೋಡಿಸುವ 87 ಶತಕೋಟಿ ಡಾಲರ್ ಮೊತ್ತದ ಯೋಜನೆಯ...

ದೌದ್ಹನ್(ಮಧ್ಯ ಪ್ರದೇಶ): ದೇಶದ ಪ್ರಮುಖ ದೊಡ್ಡ ನದಿಗಳನ್ನು ಜೋಡಿಸುವ 87 ಶತಕೋಟಿ ಡಾಲರ್ ಮೊತ್ತದ ಯೋಜನೆಯ ಕಾಮಗಾರಿಯನ್ನು ಇನ್ನು ಒಂದು ತಿಂಗಳಲ್ಲಿ ಆರಂಭಿಸಲಿದೆ.
ನೆರೆ ಪ್ರವಾಹ ಮತ್ತು ಬರಗಾಲಗಳನ್ನು ತಡೆಗಟ್ಟಲು ಪ್ರಧಾನಿ ಮೋದಿಯವರ ಮಹಾತ್ವಾಕಾಂಕ್ಷಿ ಯೋಜನೆ ಇದಾಗಿದೆ.
ಈ ಮಹಾ ಯೋಜನೆಯು ಗಂಗಾ ನದಿ ಸೇರಿದಂತೆ ಸುಮಾರು 60 ನದಿಗಳನ್ನು ಜೋಡಿಸುವುದಾಗಿದೆ. ಇದರಿಂದ ರೈತರು ಬೆಳೆ ಬೆಳೆಯಲು ಮಳೆಯನ್ನು ಆಶ್ರಯಿಸುವುದನ್ನು ತಡೆಗಟ್ಟಬಹುದು. ರೈತರಿಗೆ ಕೃಷಿ ಕಾರ್ಯಕ್ಕೆ ಸಾಕಷ್ಟು ನೀರೊದಗಿಸುವುದು ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಸರ್ಕಾರ ಹೇಳುತ್ತಿದೆ.
ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಮಳೆ ಸುರಿಯದೆ ಬರಗಾಲ ಅನುಭವಿಸಿದ್ದರೆ ಇತ್ತೀಚಿನ ವಾರಗಳಲ್ಲಿ ಸತತ ಮಳೆಯಿಂದ ಭಾರತದ ಹಲವು ರಾಜ್ಯಗಳು, ಬಾಂಗ್ಲಾದೇಶ ಮತ್ತು ನೇಪಾಳಗಳಲ್ಲಿ ಅತ್ಯಧಿಕ ಮಳೆ ಬಂದು ನೆರೆ ಪ್ರವಾಹ ಉಂಟಾಗಿದೆ.
ನದಿ ಜೋಡಣೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದು ಅನುಮತಿ ನೀಡಿದ್ದಾರೆ. ಇದರಿಂದ ಸಾವಿರಾರು ಮೆಗಾವ್ಯಾಟ್ ವಿದ್ಯುತ್ ನ್ನು ಕೂಡ ಉತ್ಪಾದಿಸಬಹುದು ಎನ್ನಲಾಗಿದೆ. ಆದರೂ ಈ ನದಿ ಜೋಡಣೆಗೆ ಪರಿಸರತಜ್ಞರು, ಹುಲಿ ಸಂರಕ್ಷಣೆಗಾರರು ಮದು ಮಾಜಿ ರಾಜಮನೆತನದ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಾರೆ.
ಬೆತ್ವಾಗೆ ಸಂಪರ್ಕ ಕಲ್ಪಿಸುವ 22 ಕಿಲೋ ಮೀಟರ್ ಉದ್ದದ ಕಾಲುವೆಗ ಉತ್ತರ-ಮಧ್ಯ ಭಾರತದ ಕೆನ್ ನದಿಗೆ ಅಣೆಕಟ್ಟು ಕಟ್ಟುವ ಯೋಜನೆ ಇದಾಗಿದೆ.
ಕೆನ್ ಮತ್ತು ಬೆತ್ವಾ ಎರಡೂ ನದಿಗಳು ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶಗಳಲ್ಲಿ ಹರಿಯುತ್ತವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT