ನಟ ವಿಶಾಲ್ 
ದೇಶ

ಪಕ್ಷೇತರ ಅಭ್ಯರ್ಥಿಯಾಗಿ ಆರ್ ಕೆ ನಗರ ಉಪಚುನಾವಣೆಗೆ ಸ್ಪರ್ಧಿಸಲಿರುವ ನಟ ವಿಶಾಲ್?

ಕಾಲಿವುಡ್ ನಟ ವಿಶಾಲ್ ತಮಿಳಿನಾಡಿನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.

ಕಾಲಿವುಡ್ ನಟ ವಿಶಾಲ್ ತಮಿಳಿನಾಡಿನ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. 
ಚಿತ್ರರಂಗದಲ್ಲಿರುವ ಭ್ರಷ್ಟಾಚಾರವನ್ನು ಹಾಗೂ ಸಿನಿಮಾದಲ್ಲಿ ರಾಜಕಾರಣಿಗಳು ಹಸ್ತಕ್ಷೇಪ ಮಾಡುವುದನ್ನು ವಿರೋಧಿಸುವ ನಟ ವಿಶಾಲ್, ಸೋಮವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಮೆರ್ಸಲ್ ಚಿತ್ರದ ಪೈರೆಟೆಡ್ ಆವೃತ್ತಿಯನ್ನು ವೀಕ್ಷಿಸಿದ್ದ ಬಿಜೆಪಿ ನಾಯಕ ಹೆಚ್ ರಾಜ ಅವರ ಕ್ರಮವನ್ನು ವಿಶಾಲ್ ತೀವ್ರವಾಗಿ ಖಂಡಿಸಿದ್ದರು. 
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ನಿಧನದಿಂದಾಗಿ ತೆರವುಗೊಂಡಿದ್ದ ಆರ್ ಕೆ ನಗರ ವಿಧಾನಸಭೆಗೆ ಡಿ.21 ರಂದು ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಐಎಡಿಎಂಕೆ ಇ ಮಧುಸೂಧನ್ ಅವರನ್ನು ಕಣಕ್ಕಿಳಿಸಿದ್ದರೆ ಡಿಎಂಕೆ ಮರುಧು ಗಣೇಶ್ ಅವರನ್ನು ಕಣಕ್ಕಿಳಿಸಿದೆ. ಇದೇ ವೇಳೆ ಎಐಎಡಿಎಂಕೆಯ ಬಂಡಾಯ ನಾಯಕ ಟಿಟಿವಿ ದಿನಕರನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿಯಿಂದ ಕರು ನಾಗರಾಜನ್ ಹಾಗೂ ಜಯಲಲಿತಾ ಸೋದರ ಸಂಬಂಧಿ ದೀಪಾ ಜಯಕುಮಾರ್ ಸಹ ಉಪಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT